ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮತ್ತು ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ‘ಚಿರಾಗ್’ (CHIRAG’) ಆ್ಯಪ್ ಅಭಿವೃದ್ಧಿಪಡಿಸಿದೆ.
ರಾಜ್ಯದ ಯಾವುದೇ ಮೂಲೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಮಾಹಿತಿಯನ್ನು ಈ ಆ್ಯಪ್ಗೆ ಭರ್ತಿ ಮಾಡಿದ ಕೂಡಲೇ ಅದು ಮಕ್ಕಳ ಸಹಾಯವಾಣಿ ಕೇಂದ್ರಗಳು ಮತ್ತು ಪೊಲೀಸರಿಗೆ ರವಾನೆಯಾಗುತ್ತದೆ. ನಂತರ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ರಕ್ಷಣೆ ಮಾಡುತ್ತಾರೆ. ದೂರು ನೀಡಿದ ನಾಗರಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಈ ಆ್ಯಪ್ನಲ್ಲಿ ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ ಮಾಹಿತಿಯು ರಾಜ್ಯದ ಎಲ್ಲಾ ಪೊಲೀಸ್ ಠಾಣೆ ಮತ್ತು ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಗಳಿಗೆ ರವಾನೆಯಾಗುತ್ತದೆ. ಜಿಪಿಆರ್ಎಸ್ ತಂತ್ರಜ್ಞಾನದ ಮೂಲಕ ದೂರು ನೀಡಿದ ವ್ಯಕ್ತಿಯ ಸ್ಥಳವನ್ನು ಪತ್ತೆ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು, ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕಳೆದು ಹೋದ ಮಕ್ಕಳನ್ನು ಹುಡುಕುಲೂ ಈ ಆ್ಯಪ್ ನೆರವಾಗಲಿದೆ. chirag-app ಕೃಪೆ ಪ್ರಜಾವಾಣಿ 23-11-2016, ಬುಧವಾರ
0 Comments
ಸಮಾಜಕಾರ್ಯ ಶಿಕ್ಷಣ, ಪ್ರಮೇಯದ ಪ್ರಸ್ತುತ ಸ್ಥಿತಿ ಹಾಗೂ ಭವಿಷ್ಯದ ರೂಪುರೇಷೆಗಳು
ದಿನಾಂಕ:10-02-2011 ರಂದು ಕುವೆಂಪು ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗ ಆಯೋಜಿಸಿದ್ದ ಎರಡು ದಿನದ ಕಾರ್ಯಾಗಾರ. ಸಮಾಜದಲ್ಲಿನ ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಸಮಾಜಕಾರ್ಯ ಸಂಶೋಧನೆ ದಾರಿದೀಪವಾಗಬೇಕು ಮತ್ತು ಸಮಾಜಕಾರ್ಯದಂತಹ ಶಿಕ್ಷಣದಲ್ಲಿ ರಚನಾತ್ಮಕ ಬದಲಾವಣೆಗಳನ್ನು ತಂದು ಗುಣಾತ್ಮಕ ಸಂಶೋಧನೆಗಳು ನಡೆಯಬೇಕು ಎಂದು ಪ್ರೊಫೆಸರ್ ಎಸ್.ಎ.ಭಾರಿ, ಉಪಕುಲಪತಿಗಳು, ಕುವೆಂಪು ವಿಶ್ವವಿದ್ಯಾಲಯ ಇವರು ಸಮಾಜಕಾರ್ಯ ಶಿಕ್ಷಣ, ಪ್ರಮೇಯದ ಪ್ರಸ್ತುತ ಸ್ಥಿತಿ ಹಾಗೂ ಭವಿಷ್ಯದ ರೂಪುರೇಷೆಗಳು ಕುರಿತು ಎರಡು ದಿನದ ಕಾರ್ಯಾಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಪ್ರೊಫೆಸರ್ ಐ.ಎ.ಶರೀಫ್, ನಿವೃತ್ತ ಪ್ರೊಫೆಸರ್ ನಿಮ್ಹಾನ್ಸ್, ಬೆಂಗಳೂರು, ಇವರು ಸಮಾಜಕಾರ್ಯ ಶಿಕ್ಷಣದಲ್ಲಿನ ಬದಲಾವಣೆ ಮತ್ತು ಪ್ರಚಲಿತ ಸ್ಥಿತಿಗತಿಗಳ ಬಗ್ಗೆ ಗಮನಹರಿಸಬೇಕು ಮತ್ತು ಪ್ರಚಲಿತ ಸಮಸ್ಯೆಗಳನ್ನು ಬಗೆಹರಿಸುವ ವೈಜ್ಞಾನಿಕ ವಿಧಾನವಾಗಿ ಇನ್ನೂ ಸಮಾಜಕಾರ್ಯದ ಅಭಿವೃದ್ಧಿ ಆಗಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿ ಪ್ರೊಫೆಸರ್ ಜಿ.ಎಸ್.ಬಿದರಕೊಪ್ಪ, ನಿವೃತ್ತ ಪ್ರೊಫೆಸರ್, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ. ಇವರು ಪ್ರಸ್ತುತ ಜಾಗತೀಕರಣದಲ್ಲಿ ಸಮಾಜಕಾರ್ಯದ ಶಿಕ್ಷಣದಲ್ಲಿ ವೈಜ್ಞಾನಿಕ ಪಠ್ಯಕ್ರಮ, ಬೋಧನಾ ವಿಧಾನ ಮತ್ತು ಕ್ಷೇತ್ರಕಾರ್ಯದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು ಮತ್ತು ಸಂಶೋಧನೆಗಳು ನಡೆದು ಹೆಚ್ಚು ಕ್ಷೇತ್ರಗಳಲ್ಲಿ ವಿಸ್ತಾರವಾಗಬೇಕು ಎಂದು ಕರೆ ನೀಡಿದರು. ಅಧ್ಯಾಯ-ಒಂದು
ಗುಣತ್ರಯಗಳು ಮತ್ತು ಜೀವನ ಪದ್ಧತಿ ಪೀಠಿಕೆ ಯಾವುದೇ ಸಮಾಜದಲ್ಲಿ ಆಗಲಿ ಅನೇಕ ರೀತಿಯ ಜನರನ್ನು ನಾವು ಗುರುತಿಸುತ್ತೇವೆ. ಕೆಲವರು ತುಂಬಾ ಮೃದು ಸ್ವಭಾವದವರಾಗಿರುತ್ತಾರೆ. ಜ್ಞಾನವಂತರಾಗಿರುತ್ತಾರೆ. ತುಂಬಾ ಸರಳ ಜೀವನ ನಡೆಸುತ್ತಿರುತ್ತಾರೆ. ಸರಳ ಜೀವನ ಮತ್ತು ಉದಾತ್ತ ಧ್ಯೇಯ ಹೊಂದಿದವರಾಗಿರುತ್ತಾರೆ. ನೇರ ನಡೆ -ನೇರ ನುಡಿ ಅವರ ಜೀವನದ ಮಂತ್ರವಾಗಿರುತ್ತದೆ. ಅಂತಹವರು ತುಂಬಾ ಸುಸಂಸ್ಕೃತ ಕುಟುಂಬದಿಂದ, ಪರಿಸರದಿಂದ ಬಂದವರಾಗಿರುತ್ತಾರೆ. ಅವರು ಹೆಚ್ಚಿನ ತಿಳುವಳಿಕೆಯಿಂದ ಕೂಡಿದ್ದು ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಅವರು ಎಲ್ಲರಿಗೂ ಬೇಕಾದವರಾಗಿರುತ್ತಾರೆ. ಅಂತಹವರು ಎಲ್ಲರನ್ನೂ ಪ್ರೀತಿಸುವ, ಎಲ್ಲರನ್ನೂ ಆತ್ಮೀಯತೆಯಿಂದ ಕಾಣುವ ಪ್ರವೃತ್ತಿಯವರಾಗಿರುತ್ತಾರೆ. ಅಂತಹವರ ಸಂಪರ್ಕ ಸಂತೋಷವನ್ನೂ ಹಾಗೂ ಸಮಾಧಾನವನ್ನೂ ತರುತ್ತದೆ. ಅವರು ಸಮಷ್ಟಿ ಹಿತವನ್ನು ಕಾಪಾಡುವಲ್ಲಿ ಆಸಕ್ತಿಯನ್ನು ಹೊಂದಿದವರಾಗಿರುತ್ತಾರೆ. ಸಮಾಜಕಾರ್ಯ ಎಂದರೇನೇ ವಿಚಿತ್ರವಾಗಿ ಕಾಣುತ್ತಿದ್ದ ಕಾಲ ಮರೆಯಾಗಿ ತನ್ನ ವಿಶಿಷ್ಟತೆಯಿಂದ ಸಮಾಜದಲ್ಲಿ ಗೌರವ ಗಳಿಸುತ್ತಿರುವ ಕಾಲದಲ್ಲಿ ಸಮಾಜಕಾರ್ಯ ಅವಸಾನದ ಹಾದಿ ಹಿಡಿದಿರುವುದು ನಿಜಕ್ಕೂ ದುರ್ದೈವದ ಸಂಗತಿ. ಭಾರತದ ಇತಿಹಾಸದ ಪುಟಗಳನ್ನು ತಿರುವಿಹಾಕಿದಾಗ ಸಮಾಜಕಾರ್ಯವು ಸಮಾಜಸೇವೆಯ ಹೆಸರಿನಲ್ಲಿ ಪುರಾತನ ಕಾಲದಿಂದಲೂ ಆಚರಣೆಯಲ್ಲಿದ್ದಿತ್ತು. ಸೇವೆಯೇ ಸಮಾಜಕಾರ್ಯದ ಜೀವಾಳ. ಆದರೆ ಅದನ್ನು ವ್ಯವಸ್ಥಿತವಾಗಿ, ವೈಜ್ಙಾನಿಕ ಜ್ಞಾನದಡಿ ಕ್ರಮಬದ್ಧವಾಗಿ ಆಚರಣೆಗೆ ತಂದಿದ್ದು ಮಾತ್ರ 1936 ರ ತರುವಾಯ. ನಂತರದ ದಿನಗಳಲ್ಲಿ ಸಮಾಜಕಾರ್ಯವನ್ನು ಒಂದು ವಿಶಿಷ್ಟ ವಿಷಯವಾಗಿ ಪರಿಗಣಿಸಲ್ಪಟ್ಟು ಪದವಿ, ಸ್ತಾಯಕೋತ್ತರ ಮತ್ತು ಸ್ನಾತಕ ಹಂತಗಳಲ್ಲಿ ಬೋಧಿಸಲು ದೇಶದ ಬಹುತೇಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳೂ ಹಾಗೂ ಪರಿಗಣಿಸಲ್ಪಟ್ಟ ಖಾಸಗಿ ವಿಶ್ವವಿದ್ಯಾಲಯಗಳು (ಡೀಮ್ಡ್ ಯೂನಿವರ್ಸಿಟಿ) ಮುಂದಾದವು. ಇದರ ಫಲವಾಗಿ ಇಂದು ಸಮಾಜಕಾರ್ಯ ಮನೆಮಾತಾಗಿದೆ ಹಾಗೂ ಸಮಾಜಕಾರ್ಯವನ್ನು ಅಭ್ಯಸಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದೆ. ಸಮಾಜಕಾರ್ಯ ಶಿಕ್ಷಣವನ್ನು ಪಡೆದ ಬಹುಪಾಲು ಜನರು ಸಮಾಜದ ವಿವಿಧ ವಲಯಗಳಲ್ಲಿ, ವಿವಿಧ ಸ್ಥರಗಳಲ್ಲಿ ಹಾಗೂ ವಿವಿಧ ಬಗೆಯ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ವಿಶಿಷ್ಟ ಛಾಪನ್ನು ಮೂಡಿಸಿದ್ದಾರೆ / ಮೂಡಿಸುತ್ತಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ರಂಗಗಳಲ್ಲಿ ಅಷ್ಟೇ ಅಲ್ಲದೇ ಸ್ವಯಂಸೇವಾ ವಲಯ ಹಾಗೂ ಸಾಮಾಜಿಕ ಕ್ರಿಯೆಗೆ ಸಂಬಂಧಿಸಿದಂತಹ ವಿಭಿನ್ನ ವಲಯಗಳಲ್ಲಿ ಸಮಾಜಕಾರ್ಯಕರ್ತರು ಕೈಗೊಂಡ ಕಾರ್ಯ ಅವಿಸ್ಮರಣೀಯ. ಹೀಗೆ ಸಮಾಜದ ವಿವಿಧ ರಂಗ ಹಾಗೂ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ಸಮಾಜದಿಂದ ಮನ್ನಣೆ ಮತ್ತು ಗೌರವಗಳನ್ನು ಸಂಪಾದಿಸಿಕೊಳ್ಳುತ್ತಿರುವ ಬಹುಪಾಲು ಸಮಾಜಕಾರ್ಯಕರ್ತರು, ತಮ್ಮ ವೃತ್ತಿಯ ಆಶೋತ್ತರಗಳನ್ನು, ಮೌಲ್ಯಗಳನ್ನು, ತತ್ವಗಳನ್ನು ಮತ್ತು ವೃತ್ತಿ ಧರ್ಮವನ್ನು ಸಂಪೂರ್ಣವಾಗಿ ಮರೆತಂತಿದೆ. ಇದರ ಫಲವಾಗಿ ಇಂದು ಸಮಾಜಕಾರ್ಯ ಅವಸಾನದತ್ತ ಸಾಗುತ್ತಿದೆ. ಪ್ರಸ್ತುತ ಈ ಹೇಳಿಕೆಯನ್ನು ಯಾವ ವೃತ್ತಿಪರ ಸಮಾಜಕಾರ್ಯಕರ್ತನೂ ಒಪ್ಪುವುದಿಲ್ಲ ಕಾರಣ ಸಮಾಜಕಾರ್ಯ ಶಿಕ್ಷಣದಲ್ಲಿ ಆಗುತ್ತಿರುವ ಬದಲಾವಣೆಗಳ ಸೂಕ್ಷ್ಮತೆಯನ್ನು ಅರಿಯುವಲ್ಲಿ ಬಹುತೇಕರು ವಿಫಲರಾಗಿದ್ದಾರೆ.
ಅವಸಾನದತ್ತ ಸಮಾಜಕಾರ್ಯ ಶಿಕ್ಷಣ ಲೇಖನಕ್ಕೆ ಸಂಬಂಧಿಸಿದಂತೆ ಸಮಾಜಕಾರ್ಯ ಕ್ಷೇತ್ರದ ಕೆಲವು ಮಿತ್ರರು ಕರೆಮಾಡಿ ಈ ಲೇಖನವನ್ನು ಬರೆದಿದ್ದು ಯಾರು ಎಂದು ಕೇಳಿದರು. ಈಗಾಗಲೇ ಈ ಲೇಖನ ಬರೆದವರಿಗೆ ನಾವು ನಿಮ್ಮ ಹೆಸರನ್ನು ಬೇರೆಯವರಿಗೆ ಹೇಳುವುದಿಲ್ಲ ಎಂಬ ಭರವಸೆಯನ್ನು ನೀಡಿರುವುದರಿಂದ ನಾವು ಈ ಲೇಖಕರ ಹೆಸರನ್ನು ಬಹಿರಂಗ ಪಡಿಸುತ್ತಿಲ್ಲ. ಹಾಗೆಯೇ ಈ ಲೇಖನದ ಬಗ್ಗೆ ಹಲವರು ಮೆಚ್ಚುಗೆಯ ಮಾತುಗಳನ್ನು ದೂರವಾಣಿ ಕರೆಯ ಮೂಲಕ ತಿಳಿಸಿದರು ಹಾಗೂ ಅವರು ಈ ಲೇಖನ ಪ್ರಸ್ತುತ ಸಮಯಕ್ಕೆ ಸೂಕ್ತವಾಗಿದೆ ಎಂದು ಹೇಳಿದರು.
ಯಾವುದೇ ಲೇಖನಗಳಾಗಲಿ ಯಾರೊಬ್ಬರನ್ನು ಕುರಿತು, ಯಾರೊಬ್ಬರಿಗೂ ನೋವಾಗಲಿ ಎಂಬ ಉದ್ದೇಶದಿಂದ ಪ್ರಕಟಿಸುವುದಿಲ್ಲ. ಅಕಸ್ಮಾತ್ ಯಾರೊಬ್ಬರಿಗೋ ನೋವಾದರೆ, ನಮ್ಮನ್ನೇ ಕುರಿತು ಬರೆದಿದ್ದಾರೆ ಎಂದುಕೊಂಡ ಊಹೆಗಳಿಗೆ ನಮ್ಮ ಪತ್ರಿಕೆ ಜವಾಬ್ದಾರರಲ್ಲ. ಇಲ್ಲಿ ವ್ಯಕ್ತಿಗಿಂತ ಸಮಾಜಕಾರ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂಬುದನ್ನು ಸ್ಪಷ್ಟಪಡಿಸಲು ನಮ್ಮ ಪತ್ರಿಕೆ ಬಯಸುತ್ತದೆ. ಡಿಸೆಂಬರ್ 16, 2012 ರಂದು ರಾತ್ರಿ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ಲೈಂಗಿಕ ಅತ್ಯಾಚಾರ ಭಾರತದ ಇತಿಹಾಸದಲ್ಲಿ ಒಂದು ದುರ್ಭರ ಘಟನೆ. ಅಂದು, 23 ವರ್ಷದ ಮೆಡಿಕಲ್ ಕಾಲೇಜ್ ಫಿಜಿಯೊತೆರಪಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಆರು ಜನ ದುರುಳರು ಚಲಿಸುತ್ತಿರುವ ಬಸ್ಸಿನಲ್ಲಿ ಅತ್ಯಾಚಾರವೆಸಗಿದರು, ಬರೆಯಬಾರದಷ್ಟು ಅಸಹ್ಯವಾಗಿ ಅವಳನ್ನು ಗಾಯಗೊಳಿಸಿದರು, ಸಹಾಯಕ್ಕೆ ಬಂದ ಅವಳ ಮಿತ್ರನನ್ನು ಗಾಯಗೊಳಿಸಿದರು. ನಂತರ ಯುವತಿ ಮತ್ತು ಅವಳ ಮಿತ್ರನನ್ನು ನಗ್ನಗೋಳಿಸಿ ರಸ್ತೆಯಲ್ಲಿ ಎಸೆದು ಪರಾರಿಯಾದರು. ಯುವತಿಯ ಮಿತ್ರನ ಹೇಳಿಕೆಯ ಪ್ರಕಾರ, ಅಲ್ಲಿದ್ದ ಯಾರೂ ಅವರಿಗೆ ಸಹಾಯ ಮಾಡಲು ಮುಂದೆ ಬರಲಿಲ್ಲ. ಸುಮಾರು ಎರಡು ಗಂಟೆಗಳ ನಂತರ ಪೋಲೀಸರು ಬಂದರು, ಬಂದವರು ಈ ಕೇಸ್ ಯಾರ ವ್ಯಾಪ್ತಿಗೆ ಸೇರುತ್ತದೆಂಬುದನ್ನು ತೀರ್ಮಾನಿಸಲು ಕಾಲ ತೆಗೆದುಕೊಂಡರೇ ಹೊರತು ನೊಂದವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ. ಅವಳ ಮಿತ್ರನ ಹೇಳಿಕೆಗಳು ಮತ್ತು ಮಾಧ್ಯಮಗಳು ಘಟನೆಗೆ ಕೊಟ್ಟ ಪ್ರಾಮುಖ್ಯತೆ, ದೆಹಲಿಯ ನಾಗರಿಕರ ಮನಸಿನ ಮೇಲೆ ಬಹಳ ಪರಿಣಾಮ ಬೀರಿತು. ಜನರು, ಪ್ರಮುಖವಾಗಿ ಯುವಜನರು, ಬೀದಿಗಿಳಿದು ಪ್ರತಿಭಟಿಸಿದರು. ಪ್ರತಿಭಟನೆ ದೇಶದ ಉದ್ದಗಲಕ್ಕೂ ಹರಡಿತು. ಇರುಕಲಿಗೆ ಸಿಕ್ಕಿದ ದೇಶದ ಆಡಳಿತ ಕಾರ್ಯೋನ್ಮುಖವಾಗಬೇಕಾಯಿತು. ನಿಧಾನವಾಗಿ ವಿಚಾರಣೆ ಆರಂಭವಾಗಿದೆ. ಅದು ಎಲ್ಲಿಗೆ ಹೋಗುವುದೋ ತಿಳಿಯದು. ಇದೆಲ್ಲ ನಡೆಯುತ್ತಿರುವಾಗಲೇ ಆ ಯುವತಿಯನ್ನು ವಿಶೇಷ ಚಿಕಿತ್ಸೆಗೆಂದು ಸಿಂಗಪುರಕ್ಕೆ ಕಳಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವಳು ಮರಣ ಹೊಂದಿದಳು. ಇಂಥ ಘಟನೆ ಇದೇ ಮೊದಲನೆಯದೇನಲ್ಲ. ಇಂಥವು ಹಲವಾರು ಜರುಗಿವೆ. ಏನು ಕಾರಣವೋ ಅವೆಲ್ಲಕ್ಕೂ ಜನ ಈ ಮಟ್ಟದಲ್ಲಿ ಪ್ರತಿಭಟಿಸಿರಲಿಲ್ಲ. ಅದೃಷ್ಟವಶಾತ್ ಡಿಸೆಂಬರ್ ಘಟನೆ ನಿಧಾನವಾಗಿಯಾದರೂ ಜನರ ಕಣ್ಣು ತೆರಸಿತು. ಆಡಳಿತಗಾರರನ್ನು ಎಚ್ಚರಿಸಿತು.
ಯಾವಾಗಲಾದರೂ ನಾನು ಅಧಿಕೃತ ಅರ್ಜಿಯನ್ನು ತುಂಬುವಾಗ, ನನ್ನ ಉದ್ಯೋಗವನ್ನು ಅದರಲ್ಲಿ ನಮೂದಿಸುವಾಗ, ನಾನು 'ಸಮಾಜಕಾರ್ಯಕರ್ತ' ಎಂಬ ಶಬ್ದವನ್ನು ಉಪಯೋಗಿಸುತ್ತೇನೆ. ಇಷ್ಟೇ ನನಗಿರುವ ಅಧಿಕಾರ ನಿಮ್ಮ ಮಧ್ಯೆ ನಾನಿರುವುದಕ್ಕೆ. ನಾನು ಸಮಾಜವಿಜ್ಞಾನಿಗಳ ಈ ಶಾಖೆಯ ವಿದ್ಯಾರ್ಥಿಯೂ ಅಲ್ಲ, 'ಸಮಾಜಕಾರ್ಯಕರ್ತ' ಎಂಬ ಶಬ್ದವನ್ನು ನೀವೆಲ್ಲರೂ ಅರ್ಥಮಾಡಿಕೊಂಡಿರುವ ಪ್ರಕಾರ ನಾನು ತಾಂತ್ರಿಕವಾಗಿ ಸಾಮಾಜಕಾರ್ಯಕರ್ತನೂ ಅಲ್ಲ. ಹೆಚ್ಚು ಸೂಕ್ತವಾಗಿ ಹೇಳುವುದಾದರೆ ನನ್ನನ್ನು ನಾನು ರಚನಾತ್ಮಕ ಕಾರ್ಯಕರ್ತನೆಂದು ಕರೆದುಕೊಳ್ಳಬೇಕು. ಗಾಂಧೀಯುಗದಿಂದಲೂ ಸುಪರಿಚಿತವಾದದ್ದು ಈ ಶಬ್ದ; ಆ ಯುಗದ ಅನೇಕ ಶಬ್ದಗಳಂತೆ ಈ ಶಬ್ದವೂ ಅನುಪಯೋಗಿಯಾಗುತ್ತಿದೆಯೆನ್ನಿ
ಸಮಾಜಸೇವೆ ಎನ್ನುವ ಶಬ್ದ ಬಹಳ ಕಾಲದಿಂದ ನಮ್ಮ ದೇಶದಲ್ಲಿ ಪ್ರಚಾರದಲ್ಲಿತ್ತು. ಈಗಲೂ ಇದೆ. ಅದು ಪರಂಪರಾಗತವಾಗಿ ಬಂದ ಒಂದು ಕಲ್ಪನೆ. ಅತಿ ಪ್ರಾಚೀನ ಕಾಲದಲ್ಲಿ, ಸುಮಾರು ನಾಲ್ಕುಸಾವಿರ ವರ್ಷಗಳಿಗಿಂತಲೂ ಹಿಂದೆ, ಅಲೆಮಾರಿ ಜೀವನ ಕ್ರಮೇಣ ಹೈನುಗಾರಿಕೆ, ಕೃಷಿ ಆಧಾರಿತ ಜೀವನಕ್ರಮವಾಗಿ ಬದಲಾವಣೆಗೊಂಡು, ಜನಸಮುದಾಯ ಒಂದು ಕಡೆಗೆ ನಿಲ್ಲುವಂತಾಯಿತು. ಜನಪದಗಳು ಅಸ್ತಿತ್ವಕ್ಕೆ ಬಂದವು, ಈ ಸಂದರ್ಭದಲ್ಲಿ ಸಂಕಟದಲ್ಲಿರುವವರಿಗೆ ಸಹಾಯ ಮಾಡಲು ವೈಯಕ್ತಿಕ ದಾನ, ಕ್ರಮೇಣ ದಾನಧರ್ಮ, ದಾನ ಸಂಹಿತೆಗಳು ನಿರ್ಮಾಣವಾದವು. ಕಾಲಕ್ರಮದಲ್ಲಿ ಆಧುನಿಕಯುಗ ಪ್ರಾರಂಭವಾದಾಗ, ಸಾರ್ವಜನಿಕ ಕಾರ್ಯಕ್ಷೇತ್ರದಲ್ಲಿ ಕೆಲವು ಗಣ್ಯ ವ್ಯಕ್ತಿಗಳಿಂದ ಆಗ ಪ್ರಚಾರದಲ್ಲಿದ್ದ ಧರ್ಮಪ್ರೇರಿತವೆಂದು ನಂಬಲಾಗಿದ್ದ ಸಾಮಾಜಿಕ ದುಷ್ಟಾಚಾರಗಳನ್ನು, ಪದ್ಧತಿಗಳನ್ನು ನಿವಾರಿಸಿ ಸಂಕಷ್ಟಗೀಡಾಗಿದ್ದ ಜನರನ್ನು, ಮುಖ್ಯವಾಗಿ ಮೇಲ್ಜಾತಿ, ಮೇಲ್ವರ್ಗದ ವಿಧವೆಯರನ್ನು ರಕ್ಷಿಸಲು ಸಮಾಜಸುಧಾರಣಾ ಕಾರ್ಯವನ್ನು ಪ್ರಾರಂಭಿಸಿದರು. ಇವರಲ್ಲಿ ಪ್ರಮುಖರೆಂದರೆ ರಾಮ ಮೋಹನ್ರಾಯ, ಈಶ್ವರಚಂದ್ರ ವಿದ್ಯಾಸಾಗರ, ಶಶಿಪಾದ ಬ್ಯಾನರ್ಜಿ ಬಂಗಾಳದಲ್ಲಿ, ಎಂ.ಜಿ. ರಾನಡೆ, ರಾ.ಕೃ. ಭಂಡಾರಕರ, ಜಸ್ಟೀಸ್ ಚಂದಾವರಕರ, ಜ್ಯೋತಿರಾವ್ಫುಲೆ, ಪಂಡಿತಾ ರಮಾಬಾಯಿ ಮುಂಬಯಿ ಪ್ರಾಂತದಲ್ಲಿ, ಇದೇ ಸಮಯದಲ್ಲಿ ರಾಷ್ಟ್ರೀಯತಾ ಭಾವನೆ ದೇಶದಲ್ಲಿ ಹರಡತೊಡಗಿತ್ತು. ಸಮಾಜಸುಧಾರಣೆಯಿಂದ ಜನರಲ್ಲಿ ಭಿನ್ನಾಭಿಪ್ರಾಯ, ಒಡಕು ಆಗುವುದರಿಂದ, ರಾಷ್ಟ್ರೀಯತೆಗೆ ಅತ್ಯವಶ್ಯವಾದ ಜನರೆಲ್ಲರ ಒಗ್ಗಟ್ಟಿಗೆ, ಐಕ್ಯತೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಸ್ವಾತಂತ್ರ ಬಂದ ನಂತರ ಸಮಾಜಸುಧಾರಣಕಾರ್ಯ ಪ್ರಾರಂಭಿಸಬೇಕು ಎಂದು ಕೆಲವರ ವಾದ. ಈ ಗುಂಪಿನಲ್ಲಿ ಪ್ರಮುಖರೆಂದರೆ ಬಾಲಗಂಗಾಧರ ತಿಲಕ.
ಕನ್ನಡ ಭಾಷೆಯಲ್ಲಿ ಸಮಾಜಕಾರ್ಯಕ್ಕೆ ಸಂಬಂಧಿಸಿದ ಸಾಹಿತ್ಯ ಸೃಷ್ಟಿಯಾಗುತ್ತಿಲ್ಲವೆಂಬ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಆದರೆ ಇತ್ತೀಚೆಗೆ ಹೆಚ್ಚಾಗಿ ಮಾರ್ಧ್ವನಿಸುತ್ತಿದೆ ಅಷ್ಟೇ. ಸಮಾಜಕಾರ್ಯವನ್ನು ಅಧ್ಯಯನ ವಿಷಯವನ್ನಾಗಿ ಆರಿಸಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿಗೂ ಹೊಸದೆನಿಸುವ ಸಮಾಜಕಾರ್ಯ ಪರಿಕಲ್ಪನೆಗಳನ್ನು ಆಂಗ್ಲ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಕೊಂಚ ಕಷ್ಟದ ಸಂಗತಿ ಎಂದರೆ ತಪ್ಪಾಗುವುದಿಲ್ಲ. ಇಲ್ಲಿ ಸಮಸ್ಯೆಯಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾತ್ರವೆಂಬುದು ಬಹುಪಾಲು ಸಮಾಜಕಾರ್ಯಕರ್ತರ ಧೋರಣೆ. ಆದರೆ ಅವರ ಧೋರಣೆ ಸತ್ಯಕ್ಕೆ ಸಮೀಪವಾದುದ್ದಲ್ಲ. ನಗರ ಭಾಗದಿಂದ ಬಂದಂತಹ ಬಹುಪಾಲು ವಿದ್ಯಾರ್ಥಿಗಳಿಗೂ ಸಹ ಸಮಾಜಕಾರ್ಯ ಹೊಸ ವಿಷಯವೇ ಆಗಿದ್ದು, ಇಲ್ಲಿನ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳುವುದು ಸುಲಭವಲ್ಲ. ಬಹುಶಃ ನಗರ ಭಾಗಗಳಿಂದ ಬಂದ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರಬಹುದು ಮತ್ತು ಅದೇ ಭಾಷೆಯಲ್ಲಿ ವ್ಯವಹರಿಸಲು ತಿಳಿದಿರಲೂಬಹುದು. ಆದರೆ ಅವರ ಮಾತೃಭಾಷೆ ಇಂಗ್ಲೀಷ್ ಅಲ್ಲವಲ್ಲ. ಆಂಗ್ಲ ಅಥವಾ ಕನ್ನಡ ಹೀಗೇ ಯಾವುದೇ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರೂ ಸಮಾಜಕಾರ್ಯದ ಪರಿಕಲ್ಪನೆಗಳು ಹೊಸ ವಿಚಾರಗಳೇ ಆಗಿದ್ದು, ಅವುಗಳನ್ನು ತಮ್ಮ ಮಾತೃಭಾಷೆಯಲ್ಲಿ ಕಲಿತಷ್ಟು ವೇಗವಾಗಿ ಇತರೆ ಭಾಷೆಗಳಲ್ಲಿ ಕಲಿಯುವುದು ಕಷ್ಟಸಾಧ್ಯವೆಂಬ ವಿಚಾರ ಬುದ್ದಿವಂತರೆನ್ನಿಸಿಕೊಂಡ ಎಲ್ಲರಿಗೂ ತಿಳಿದ ವಿಚಾರವೇ ಆಗಿದೆ.
ನಾನು ಎಂಬುದು ಪ್ರತಿಯೊಬ್ಬ ಮನುಷ್ಯನಲ್ಲಿಯೂ ಇರುವಂಥಹದ್ದು. ನಾನೂ ಇದಕ್ಕೆ ಹೊರತಾಗಿಲ್ಲ. ಯಾರಾದರೂ ನನ್ನನ್ನು ಹೊಗಳಿದರೆ ತಕ್ಷಣವೇ ಪುಳಕಗೊಳ್ಳುತ್ತೇನೆ. ಆದರೆ ಹೊರ ಪ್ರಪಂಚಕ್ಕೆ ತೋರ್ಪಡಿಸದಂತಿರುವ ಕಲೆ ಸಿದ್ಧಿಸಿಕೊಂಡಿದ್ದೇನೆ.
ಹೀಗೆಯೇ ಕೆಲ ವರ್ಷಗಳ ಹಿಂದೆ ಬೇಸರ ಕಳೆಯಲೆಂದು ರಾಜ್ಯ ಪರ್ಯಟನೆಗೆ ಹೊರಟೆ. ಸುಮಾರು ದಿನಗಳ ಪಯಣದ ನಂತರ ನಗರವೊಂದರಲ್ಲಿ ಮ್ಯೂಸಿಯಂ ನೋಡುವ ಅವಕಾಶ ಒದಗಿ ಬಂತು. ಅಲ್ಲಿ ಕಲಾವಿದನೊಬ್ಬನ ಪರಿಚಯವಾಯಿತು. ಆತ ನಿಜಕ್ಕೂ ಬಹಳ ಅದ್ಭುತ ಶಿಲ್ಪಿ. ಅಲ್ಲಿ ಆತನೇ ಕೆತ್ತಿನ ಅನೇಕ ಮೂರ್ತಿಗಳು ಅನಾವರಣಗೊಂಡಿದ್ದವು. ಆ ಮೂರ್ತಿಗಳು ಅದೆಷ್ಟು ಮನಮೋಹಕವಾಗಿದ್ದವೆಂದರೆ ಅವು ನಿಜವಾಗಿಯೂ ಜೀವತಳೆದು ನಿಂತಿವೆಯೇನೋ ಎಂಬಷ್ಟು ! ಸ್ವಾಮಿ ವಿವೇಕಾನಂದರು ಒಬ್ಬ `ದಡ್ಡ` ವಿದ್ಯಾರ್ಥಿಯಾಗಿದ್ದರು. `ವಿದ್ಯಾರ್ಥಿಗಳಿಗೆ ಬೋಧಿಸಲು ಬರುವುದಿಲ್ಲ` ಎಂಬ ಕಾರಣಕ್ಕೆ ಶಿಕ್ಷಕನ ಉದ್ಯೋಗ ಕಳೆದುಕೊಂಡಿದ್ದರು.
ಹುಟ್ಟಿನಿಂದಲೇ ರೋಗಿಷ್ಠರಾಗಿದ್ದ ಅವರು ಸಾಯುವ ಹೊತ್ತಿಗೆ ಒಂದೆರಡಲ್ಲ, ಮೂವತ್ತೊಂದು ಬಗೆಯ ರೋಗಗಳಿಂದ ಬಳಲಿ ಹೋಗಿದ್ದರು. ಎಲ್ಲ ಬಂಗಾಳಿಗಳಂತೆ ಅವರೊಬ್ಬ ಮಹಾ ತಿಂಡಿಪೋತರಾಗಿದ್ದರು. ಜೀವನದ ಕೊನೆಯ ದಿನದವರೆಗೂ ಅವರು ಮಾಂಸಾಹಾರಿ ಆಗಿದ್ದರು. ಜತೆಗೆ ದೇಶ-ವಿದೇಶದ ಮಾಂಸಾಹಾರಿ ಅಡುಗೆಯನ್ನು ಮಾಡುವ ಪಾಕಪ್ರಾವೀಣ್ಯತೆ ಹೊಂದಿದ್ದರು. ವ್ಯಸನಿಯಂತೆ ಸಿಗರೇಟ್-ಹುಕ್ಕಾ ಸೇದುವ ಧೂಮಪಾನಿಯಾಗಿದ್ದರು. ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಎಲ್ಲರ ಮನೆಯಲ್ಲಿ ಭೇದ ಇಲ್ಲದೆ ಊಟ ಮಾಡುತ್ತಿದ್ದರು. ಎಸ್.ಎ. ಶ್ರೀನಿವಾಸಮೂರ್ತಿ ಸಮಾಜ ಸೇವೆಯಲ್ಲಿ ನನ್ನ ಅನುಭವಗಳ ಬಗ್ಗೆ ಒಂದು ಲೇಖನ ಬೇಕೆಂದು ಕೇಳಿ ಶ್ರೀಮತಿ ಅನಿತ ಅವರು ದೂರವಾಣಿಯಲ್ಲಿ ಕರೆ ಮಾಡುವುದಕ್ಕೆ ಕೆಲವು ನಿಮಿಷಗಳ ಮೊದಲು ನನ್ನ ಮೊಬೈಲ್ ಫೋನ್ನಲ್ಲಿ ಒಂದು ಕರೆ ಬಂದಿತ್ತು. ಹೆಣ್ಣು ಧ್ವನಿಯೊಂದು ಕೇಳಿತ್ತು "ನೀವು ಒಂಟಿತನದಿಂದ ಬಳಲುತ್ತಿದ್ದೀರಾ?", ಎಂದು. ತಕ್ಷಣ "ಇಲ್ಲ" ಎಂದು ಹೇಳಿ ಅವಳ ಕರೆಯನ್ನು ಮುಗಿಸಿದ್ದೆ.
ಪ್ರೀತಿ ವಿಶ್ವಾಸದಿಂದ ಬದುಕಿನ ಏರುಪೇರುಗಳಲ್ಲಿ ಬೆಂಬಲವಾಗಿರುವ ನನ್ನ ಕುಟುಂಬ ಮತ್ತು ಬಂಧು ಮಿತ್ರರೊಡನೆ ಇರುತ್ತಿರಲಿಲ್ಲವಾದರೆ, ನನ್ನ ಉತ್ತರ "ಹೌದು" ಎಂದಾಗುತ್ತಿತ್ತೊ ಏನೊ. ಹಣ ಕೊಟ್ಟು ಸ್ನೇಹಜಾಲಗಳ ಸದಸ್ಯನಾಗಿ ಗೆಳೆತನವನ್ನು ಕೊಂಡುಕೊಳ್ಳುತ್ತಿದ್ದೆನೇನೊ. ನಮ್ಮ ಮನೆಯ ಎದುರಿನಲ್ಲಿದ್ದ ಆಟದ ಮೈದಾನದಲ್ಲಿ, ಬೆಂಗಳೂರು ಮಹಾನಗರ ಪಾಲಿಕೆಯು, ಕೆಳ ಸೇತುವೆ ನಿರ್ಮಿಸುವಾಗ ಉಂಟಾದ ಕಲ್ಲು ಮಣ್ಣುಗಳ ತ್ಯಾಜ್ಯವನ್ನು ಸುರಿದಿದ್ದರು. ಅದನ್ನು ನೋಡಿ ಖಾಸಗಿ ಕಟ್ಟಡಗಳ ಅವಶೇಷಗಳೂ ಅಲ್ಲಿ ಹಾಕಲ್ಪಟ್ಟಿದ್ದವು. ಜೊತೆಗೆ ಕೆಲವರು ಕಸದ ರಾಶಿಯನ್ನೂ ಅಲ್ಲಿ ಹಾಕಿ, ಸೊಳ್ಳೆಗಳ ಕಾಟ ಮತ್ತು ದುರ್ಗಂಧದಿಂದ ಸುತ್ತುಮುತ್ತಲಿನ ಜನ ಕಂಗಾಲಾಗಿದ್ದರು. ಅವರುಗಳ ದೂರು ಅಧಿಕಾರಿಗಳ ಮೇಲೆ ಯಾವ ಪ್ರಭಾವವನ್ನೂ ಬೀರಲಿಲ್ಲ. ಸತತ ಎರಡು ವರ್ಷಗಳ ಕಾಲ, ಪತ್ರಗಳ ಮೂಲಕ, ಪತ್ರಿಕೆಗಳಲ್ಲಿ ಲೇಖನ ಬರೆದು, ಚಿತ್ರಗಳನ್ನು ಪ್ರಕಟಿಸಿ, ಅಧಿಕಾರಿಗಳನ್ನು ಭೇಟಿ ಮಾಡಿ, ಕಡೆಗೆ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸಹಾಯದಿಂದ, ನಗರ ಪಾಲಿಕೆಯಿಂದ, ಮೈದಾನವನ್ನು ಸ್ವಚ್ಛಗೊಳಿಸಿ ಅಲ್ಲಿ ಉದ್ಯಾನವನ್ನು ಮಾಡಿಸುವಲ್ಲಿ ಫಲಪ್ರದನಾದೆ. ಇದನ್ನು ನೋಡಿ ನೆರೆಹೊರೆಯ ನಿವಾಸಿಗಳು, ಈ ಕ್ಷೇತ್ರದ ಅಭಿವೃದ್ಧಿಗೆ ಒಂದು ಸಂಘವನ್ನು ನೋಂದಾಯಿಸಿಕೊಂಡರು. ಈಗ ಇಲ್ಲಿನ ಹಿರಿಯ ನಾಗರಿಕರಿಗೆ, ಅದರಲ್ಲೂ ಸ್ತ್ರೀಯರಿಗೆ, ಬೆಳಿಗ್ಗೆ, ಸಂಜೆ ವಾಯುವಿಹಾರದ ತಾಣವಾಗಿದೆ-ಈ ಉದ್ಯಾನವನ. ವಿಶ್ವದಲ್ಲಿ ಪ್ರಚಲಿತವಾಗಿ ಅನೇಕ ಸಿದ್ಧಾಂತಗಳಿವೆ. ಅವೆಂದರೆ, ಬಂಡವಾಳಶಾಹಿ ಪದ್ಧತಿ ಬಹುಜನರ ಹಿತಕಾಯುವ ಪದ್ಧತಿ, ಸರ್ವಾಧಿಕಾರಿ ಪದ್ಧತಿ, ರೈತ, ಕಾರ್ಮಿಕರ ಹಿತಾಸಕ್ತಿಯ ಪದ್ಧತಿ ಮುಂತಾದವು. ಇವುಗಳೆಲ್ಲ ಈಗ Out of Date ಆಗಿರುವ ಪದ್ಧತಿಗಳು. 'ಸರ್ವರಿಗೂ ಸಮಪಾಲು' ಎನ್ನುವ ಸರ್ವೋದಯ ಪದ್ಧತಿ ಜಾರಿಗೆ ತರುವುದು ಗಾಂಧೀಜಿಯ ಗುರಿಯಾಗಿತ್ತು. ಸರ್ವೋದಯ, ಅಂತ್ಯೋದಯದಿಂದ ಆರಂಭವಾಗಬೇಕು. ಕಟ್ಟಕಡೆಯ ಮನುಷ್ಯನ ಅಭ್ಯುದಯಕ್ಕೇ ಆದ್ಯತೆ ಇರಬೇಕು. ಇದು ಸರ್ವೋದಯ ತತ್ತ್ವ.
ಸರ್ವೋದಯ ಸಮಾಜ ರಚನೆ ನಮ್ಮ ಗುರಿಯಾಗಬೇಕು. ಸರ್ವೋದಯ ಸಮಾಜ ರಚನೆಯ ಸೂತ್ರ ಇದಾಗಿದೆ-ಶಾಸನಮುಕ್ತ, ಶೋಷಣ ರಹಿತ, ದಂಡನಿರಪೇಕ್ಷ, ಅಹಿಂಸಕ ಸಮಾಜ ರಚನೆ. Government is the best that governs the least ಇದು ಶಾಸನಮುಕ್ತ ಸರ್ವೋದಯ ಸಮಾಜದ ಗುರಿ. ಸುಮ್ಮನೆ ಈ ವೆಬ್ಸೈಟ್ಗೆ ಭೇಟಿ ನೀಡಿ : www.socialworker.com
ಒಮ್ಮೆ ಕಣ್ಣಾಡಿಸಿ. ಬಿಎಸ್ಡಬ್ಲ್ಯೂ / ಎಂಎಸ್ಡಬ್ಲ್ಯೂ ಓದುತ್ತಿರುವ ವಿದ್ಯಾರ್ಥಿಗಳ ಅತ್ಯಂತ ಅರ್ಥಪೂರ್ಣವಾದ ಲೇಖನಗಳು ಸಿಗುತ್ತವೆ. ಆದರೆ ಇವೆಲ್ಲಾ ವಿದೇಶೀ ನೆಲಕ್ಕೆ ಸಂಬಂಧಿಸಿದಂತವು. ಇದೆಲ್ಲಾ ನೋಡಿದ ಮೇಲೆ ನಮ್ಮ ವಿದ್ಯಾರ್ಥಿಗಳು ಏಕೆ ಈ ರೀತಿ ಕ್ರಿಯಾತ್ಮಕವಾಗಿ ಲೇಖನ ಬರೆಯುವುದಿಲ್ಲ ಎನಿಸುತ್ತದೆ. ಇದಕ್ಕೆ ಈ ಪರಿಸ್ಥಿತಿಗೆ ಕಾರಣಕರ್ತರಾರು ? ವಿದ್ಯಾರ್ಥಿಗಳೋ /ವ್ಯವಸ್ಥೆಯೋ ಅಥವಾ ಪ್ರಾಧ್ಯಾಪಕರೋ ? ನಮ್ಮ ಕರ್ನಾಟಕದ ಮಟ್ಟಿಗೆ ನೋಡುವುದಾದರೆ ನೂರಾರು ಬಿಎಸ್ಡಬ್ಲ್ಯೂ / ಎಂಎಸ್ಡಬ್ಲ್ಯೂ ಕಾಲೇಜುಗಳಿವೆ. ಭಾರತದಾದ್ಯಂತ ಲೆಕ್ಕಕ್ಕೆ ಸಿಗದಷ್ಟು ಬಿಎಸ್ಡಬ್ಲ್ಯೂ / ಎಂಎಸ್ಡಬ್ಲ್ಯೂ ಕಾಲೇಜುಗಳಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಪಡೆದು ವಿಶ್ವವಿದ್ಯಾನಿಲಯಗಳಿಂದ ಹೊರಬಂದಿದ್ದಾರೆ. ಆದರೆ ನಮ್ಮಲ್ಲೇಕೆ ಬರಹಗಾರರು ಕಡಿಮೆ. ಸ್ನೇಹಿತರೇ,
ಭಾನುವಾರದಂದು ಆಯೋಜಿಸಿದ ಸಭೆಯ ಸಂಪೂರ್ಣ ಆಡಿಯೋವನ್ನು ನೀವು ಕೇಳಬಹುದು. ಈ ಆಡಿಯೋದಲ್ಲಿ ಸಭೆಯಲ್ಲಿ ಚರ್ಚಿತವಾದ ಎಲ್ಲ ವಿಷಯಗಳು ಒಳಗೊಂಡಿದೆ. ಹೀಗೆಯೇ ಮುಂದಿನ ದಿನಗಳಲ್ಲಿ ಸಮಾಜಕಾರ್ಯ ಕ್ಷೇತ್ರದ ಹತ್ತು ಹಲವು ವಿಷಯಗಳ ಕುರಿತು ಸಮಾಲೋಚನೆ ಸಭೆಗಳನ್ನು ಹಮ್ಮಿಕೊಳ್ಳಲಾಗುವುದು. ನಿಮಗೆ ಆಸಕ್ತಿ ಇದ್ದಲ್ಲಿ ಭಾಗವಹಿಸಬಹುದು. ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:
https://soundcloud.com/ramesha-niratanka/social-workers-meeting-niratanka?utm_source=soundcloud&utm_campaign=share&utm_medium=facebook https://soundcloud.com/ramesha-niratanka/social-workers-meeting?utm_source=soundcloud&utm_campaign=share&utm_medium=facebook ಸ್ನೇಹಿತರೇ
ವೃತ್ತಿನಿರತ ಸಮಾಜಕಾರ್ಯ ಕ್ಷೇತ್ರದ ಬಂಧುಗಳೇ, ಕಾವೇರಿ ಹೋರಾಟದ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಸಮಾಜಕಾರ್ಯ ವೃತ್ತಿನಿರತನು ತನ್ನ ಆತ್ಮಸಾಕ್ಷಿಯನ್ನು ಹಾಗೂ ತನ್ನ ವೃತ್ತಿಪರತೆಯನ್ನು ಪ್ರಶ್ನಿಸಿಕೊಂಡು ನಾವು ಈ ಸಂದರ್ಭದಲ್ಲಿ ನಮ್ಮ ಕರ್ತವ್ಯವೇನು ? ಎಂಬುದನ್ನು ಪ್ರಶ್ನಿಸಿಕೊಳ್ಳಬೇಕು. ಸಮಾಜಕಾರ್ಯದ ಶಿಕ್ಷಣ, ಕೌಶಲ್ಯ, ವೃತ್ತಿಪರತೆ ಯಾವ ರೀತಿ ಈ ಸಂದರ್ಭದಲ್ಲಿ ಸದುಪಯೋಗ ಪಡಿಸಿಕೊಂಡು ಸಮಸ್ಯೆಯ ಭಾಗವಾಗಬೇಕು ಎಂಬ ಕನಿಷ್ಟ ಸೌಜನ್ಯ ನಾವು ತೋರಲಿಲ್ಲವೆಂದರೆ ತಪ್ಪಾಗುವುದಿಲ್ಲ. ಸಮಾಜಕಾರ್ಯ ಸಂಘಟನೆಗಳ ಮೂಲಕ ಈ ಸಂದರ್ಭದಲ್ಲಿ ವೃತ್ತಿಪರ ಸಮಾಜಕಾರ್ಯಕರ್ತರಾದ ನಾವು ರೈತರ ಪರವಾಗಿ ಒಕ್ಕೊರಲಿನಿಂದ ಬೆಂಬಲಿಸಬೇಕಾಗಿದ್ದು ಕರ್ನಾಟಕದ ಯಾವೊಂದು ವೃತ್ತಿಪರ ಸಮಾಜಕಾರ್ಯ ಸಂಘಟನೆಯು ಈ ವಿಷಯದಲ್ಲಿ ಮೌನ ತಳೆದಿರುವುದು ಬೇಸರದ ಸಂಗತಿ. ಕಾನೂನು ಆಯೋಗದ ಪರಿಶೀಲನೆಗೆ ವಹಿಸಲು ಸುಪ್ರೀಂಕೋರ್ಟ್ ಚಿಂತನ
ನವದೆಹಲಿ: ದೇಶದಲ್ಲಿ ಕೆಲಸ ಮಾಡುತ್ತಿರುವ ಅಂದಾಜು 30 ಲಕ್ಷ ಸ್ವಯಂಸೇವಾ ಸಂಘಟನೆಗಳಿಗೆ (ಎನ್ಜಿಒ) ಬರುತ್ತಿರುವ ಹಣಕಾಸಿನ ಅನುದಾನದ ಮೇಲೆ ನಿಗಾ ಇಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಕಾನೂನು ಆಯೋಗವನ್ನು ಕೋರಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಈ ವಿಚಾರದಲ್ಲಿ ತನಗೆ ಸಹಾಯ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ವಿಭಾಗೀಯ ಪೀಠವು, ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರನ್ನು ಅಮಿಕಸ್ ಕ್ಯೂರಿ (ನ್ಯಾಯಾಲಯದ ಸಹಾಯಕ) ಆಗಿ ನೇಮಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗಕ್ಕೆ ಬಿಓಇ/ಬಿಓಎಸ್ ಗೆ ಅರ್ಹತೆಯುಳ್ಳ ಹಲವಾರು ಅಭ್ಯರ್ಥಿಗಳು ಬೆಂಗಳೂರಿನಲ್ಲಿದ್ದರೂ ನಮಗೆ ಮಾನ್ಯತೆ ನೀಡದೆ ಹೊರಗಡೆಯವರಿಗೆ ಮಾನ್ಯತೆ ನೀಡುವ ಉದ್ದೇಶವೇನು ? ಬೆಂಗಳೂರಿನಲ್ಲಿರುವ ನಮಗೆ ಮಾನ್ಯತೆ ನೀಡದೆ ಇರುವುದಕ್ಕೆ ಯಾವುದಾದರೂ ತಾಂತ್ರಿಕ ಅಡಚಣೆಗಳಿದೆಯೇ ಸ್ವಾಮಿ ?
ಈ ವರ್ಷದ ಸಮಾಜಕಾರ್ಯ ವಿಭಾಗದ Affiliated ಕಾಲೇಜುಗಳ Admission ಅನ್ನು ಗಮನಿಸಿದರೆ ಕೆಲವೊಂದು ಕಾಲೇಜುಗಳಿಗೆ ಕೇವಲ ಒಬ್ಬರು, ಇಬ್ಬರು ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸೇರಿಕೊಂಡಿದ್ದಾರೆ. ಈ ಪರಿಸ್ಥಿತಿಯ ನಿರ್ಮಾಣಕ್ಕೆ ಕಾರಣಕರ್ತರಾರು ? ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಬಹುಪಾಲು ಪ್ರಾಧ್ಯಾಪಕರು ತರಗತಿಗೆ ಹೋಗದೆ ಸಂಬಳ ಎಣಿಸುತ್ತಿದ್ದಾರೆ. ಹೀಗಾದರೆ ಸಮಾಜಕಾರ್ಯ ವಿದ್ಯಾರ್ಥಿಗಳ ಪಾಡೇನು ? ರೋಶನಿ ಸಂಸ್ಥೆಯ ಸಮಾಜಕಾರ್ಯ ವಿದ್ಯಾರ್ಥಿಗಳ ಸಂಘವು ಬೆಂಗಳೂರು ನಗರದ Century Club ನಲ್ಲಿ ದಿನಾಂಕ: 18-10-2013ರಂದು ಸಮಾರಂಭವನ್ನು ಏರ್ಪಡಿಸಿತ್ತು. ಸುಮಾರು 400 ರೋಶನಿ ವಿದ್ಯಾಸಂಸ್ಥೆಯ ಸಮಾಜಕಾರ್ಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರೋಶನಿ ವಿದ್ಯಾಸಂಸ್ಥೆಯ ಸಮಾಜಕಾರ್ಯ ವಿದ್ಯಾರ್ಥಿ ಹಾಗೂ ಕರ್ನಾಟಕ ಸರ್ಕಾರದ ಮಾನ್ಯ ನಗರಾಭಿವೃದ್ಧಿ ಸಚಿವರಾದ ವಿನಯಕುಮಾರ್ ಸೊರಕಿಯವರು ಮಾತನಾಡುತ್ತಾ, ರೋಶನಿ ಸಂಸ್ಥೆಯ ಸಮಾಜಕಾರ್ಯ ವಿದ್ಯಾರ್ಥಿ ಸಂಘವು ಬೆಂಗಳೂರಿನಲ್ಲಿ ಈ ಮಟ್ಟದಲ್ಲಿ ಬೆಳೆದಿದೆ. ಈ ರೀತಿಯಲ್ಲಿ ನಮ್ಮ ಸಂಘ ದೊಡ್ಡ ಮಟ್ಟದಲ್ಲಿ ಬೆಳೆದಿದೆ ಎಂಬುದನ್ನು ನಾನು ಊಹಿಸಿಕೊಂಡಿರಲಿಲ್ಲ ಎಂದರು.
ಸ್ನೇಹಿತರೇ,
ಸಮಾಜಕಾರ್ಯದ ಹೆಜ್ಜೆಗಳು ಪತ್ರಿಕೆಯ ಕನ್ನಡದ ಹೊಸ ವೆಬ್ಸೈಟ್ ಆಗಿ "www.samajakarya.org" ನೋಂದಾಯಿಸಿದ್ದೇವೆ. ಮೊದಲಿನ ಇಂಗ್ಲೀಷ್ ವೆಬ್ಸೈಟ್ "www.socialworkfootprints.org" ಇಂಗ್ಲೀಷ್ ಲೇಖನಗಳಿಗೆ ಮಾತ್ರ ಮೀಸಲು ಮಾಡಿದ್ದೇವೆ.ಕನ್ನಡದ ಎಲ್ಲಾ ಹಳೆಯ ಸಂಚಿಕೆಗಳ ಲೇಖನಗಳನ್ನು ಈ ವೆಬ್ ತಾಣದಲ್ಲಿ ಪ್ರಕಟಿಸಲಾಗುವುದು ಹಾಗೂ ಸದಸ್ಯರಾದವರಿಗೆ ಮಾತ್ರ ವೆಬ್ಸೈಟ್ನ 5 ವರ್ಷದ ಎಲ್ಲಾ ಹಳೆಯ ಸಂಚಿಕೆಗಳ ಲೇಖನಗಳನ್ನು ಹಾಗೂ UGC Net Exam, CTPO Exam ಗಳಿಗೆ ಬೇಕಾದ ಮಾಹಿತಿ ತಿಳಿಯಲು ಅವಕಾಶ ನೀಡಲಾಗುವುದು. ಈ ಕನ್ನಡದ ವೆಬ್ಸೈಟ್ ಅನ್ನು ರಚಿಸಿ ಎಂದು ಸಲಹೆ ನೀಡಿ ಹಣಕಾಸು ನೆರವು ನೀಡಿದ ಸ್ನೇಹಿತರಿಗೆ ಧನ್ಯವಾದಗಳು. ಈ ಒಂದು ಪ್ರಯತ್ನದಲ್ಲಿ ತಾವೆಲ್ಲರೂ ನಮ್ಮ ಜೊತೆಗಿದ್ದು ಸಹಕರಿಸಿ. ರಮೇಶ ಎಂ.ಎಚ್. ಸಂಪಾದಕರು ಸಮಾಜಕಾರ್ಯದ ಹೆಜ್ಜೆಗಳು ಪ್ರೊ|| ಡಾ. ಎಚ್. ಎಂ. ಮರುಳಸಿದ್ಧಯ್ಯನವರಿಗೆ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದರ ಮೂಲಕ ಸಮಾಜಕಾ7/6/2017 ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ ಮಾನ್ಯರೆ, ನಮಸ್ಕಾರ. ವಿಷಯ: ಕರ್ನಾಟಕದಲ್ಲಿ ಸಮಾಜಕಾರ್ಯ ಶಿಕ್ಷಣ ಮತ್ತು ಪ್ರಯೋಗಗಳನ್ನು ಆರಂಭಿಸಿದ ಪ್ರೊ|| ಡಾ. ಎಚ್. ಎಂ.ಮರುಳಸಿದ್ಧಯ್ಯನವರಿಗೆ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದರ ಮೂಲಕ ಸಮಾಜಕಾರ್ಯ ಕ್ಷೇತ್ರಕ್ಕೆ ಮನ್ನಣೆನೀಡಬೇಕೆಂದು ಕೋರಿಕೆ 'ವೃತ್ತಿಶೀಲ ಸಮಾಜಕಾರ್ಯ' ಕ್ಷೇತ್ರಕ್ಕೆ ಭಾರತೀಯ ಸಂಸ್ಕೃತಿಯ ಭಾಷ್ಯ ಬರೆದು, ಅದಕ್ಕೆ ಸಮರ್ಥವಾದ ಕ್ಷೇತ್ರಕಾರ್ಯ, ಚಿಂತನೆ, ಸಾಹಿತ್ಯ ಸೃಷ್ಟಿ ಮಾಡಿ ದೇಶದಾದ್ಯಂತ 'ಹುಲ್ಲುಬೇರುಗಳ ನಡುವೆ' ಸಮುದಾಯ ಸಂಘಟನೆಗಾಗಿ ಮತ್ತು ಸಮಾಜಕಾರ್ಯ ತತ್ತ್ವದ ಉನ್ನತಿಗಾಗಿ ಸಾಧಕರನ್ನು ಸೃಷ್ಟಿ ಮಾಡಿದ ಧೀಮಂತರು ಪ್ರೊ. ಎಚ್. ಎಂ. ಮರುಳಸಿದ್ಧಯ್ಯನವರು. ನಮ್ಮ ಹಳ್ಳಿಗಳ ಎಷ್ಟೋ ಹೆಣ್ಣುಮಕ್ಕಳು ಧೈರ್ಯವಾಗಿ ಶಾಲಾ ಕಾಲೇಜುಗಳಿಗೆ ಹೋಗಿಬರಲು ಆಗುತ್ತಿಲ್ಲ. ಭಯ ಅಥವಾ ರಕ್ಷಣೆಯ ಕೊರತೆಯಿಂದಾಗಿ ಅವರು ಶಿಕ್ಷಣ ತೊರೆಯುತ್ತಿದ್ದಾರೆ. ಒಂದು ಕಡೆ ಹೆಣ್ಣುಮಕ್ಕಳು ಕಲಿಯಬೇಕು, 18ರೊಳಗೆ ಮದುವೆಯಾಗಬಾರದು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಅವರು ಕಾಲೇಜು ಬಿಟ್ಟರೆ, ಮನೆಯವರು ಮದುವೆಯಾಗು ಎನ್ನುತ್ತಾರೆ. ಶಾಲೆಗೆ ಕಾಲೇಜಿಗೆ ಒಂಟಿಯಾಗಿ ಬಸ್ನಲ್ಲಿ ಹೋಗಿಬರುವುದಕ್ಕೇ ಅಡ್ಡಿಗಳಿವೆ. ಬೀದಿ ಕಾಮಣ್ಣರು, ಅತ್ಯಾಚಾರಿಗಳು ಕೊಡುವ ಕೊಟಲೆಗಳನ್ನು ದಿನವೂ ನಾವು ಪತ್ರಿಕೆಗಳಲ್ಲಿ ಓದುತ್ತಿರುತ್ತೇವೆ. ಮನೆಗಳಲ್ಲಿರುವ ಪೋಷಕರೂ ಹೀಗೇ ಯೋಚಿಸುತ್ತಾರೆ. ಶಾಲೆಗೆ ಹೋಗಲೇಬೇಡ ಎನ್ನುತ್ತಾರೆ. ಇವನ್ನು ಬಗೆಹರಿಸುವುದು ಹೇಗೆ? ಮಕ್ಕಳ ಹಕ್ಕುಗಳಿಗಾಗಿ ಶಾಸಕರ ವೇದಿಕೆ ಮತ್ತು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ಸಂಸತ್ ಮತ್ತು ವಿಧಾನಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿಗಳೊಡನೆ ಮಕ್ಕಳ ಸಮಾಲೋಚನೆಯಲ್ಲಿ ಮಕ್ಕಳ ಪ್ರತಿನಿಧಿಗಳು ಮುಂದಿಟ್ಟಿದ್ದ ವಿಚಾರ (ನವೆಂಬರ್ 17, 2015). ಇದೇ ರೀತಿ ಹಲವು ವಿಚಾರಗಳು ಮುಖ್ಯಮಂತ್ರಿಗಳ ಮುಂದೆ ಮಕ್ಕಳು ಮಂಡಿಸುತ್ತಿದ್ದರು. ಮಕ್ಕಳ ಅಂಗವಿಕಲತೆ ತಡೆ, ಶಿಕ್ಷಣ, ಒಟ್ಟಾರೆಯಾಗಿ ಮಕ್ಕಳ ರಕ್ಷಣೆ, ಪೌಷ್ಟಿಕತೆ, ಆರೋಗ್ಯ, ಹೆಚ್.ಐ.ವಿ. ಏಡ್ಸ್ ಬಾಧಿತ ಮಕ್ಕಳು, ಮಕ್ಕಳ ಸಾಗಣೆ, ಮಕ್ಕಳ ಮೇಲೆ ಆಗುವ ತೊಂದರೆಗಳು, ಇತ್ಯಾದಿ.
ಎನ್.ವಿ. ವಾಸುದೇವ ಶರ್ಮಾ ಕಾರ್ಯಕಾರಿ ನಿರ್ದೇಶಕ, ಚೈಲ್ಡ್ ರೈಟ್ಸ್ ಟ್ರಸ್ಟ್, ಬೆಂಗಳೂರು ಆಧುನಿಕ ಯುಗದಲ್ಲಿ ದಲಿತರು ಎದುರಿಸುತ್ತಿರುವ ಹಲವಾರು ಸವಾಲುಗಳಲ್ಲಿ ಜಾಗತೀಕರಣವೂ ಒಂದಾಗಿದೆ. 20ನೇ ಶತಮಾನದ ಅಮೇರಿಕಾ ನೇತೃತ್ವದ ಜಾಗತೀಕರಣ ಶ್ರೀಮಂತರ ಮತ್ತು ಬಡವರ ನಡುವಿನ ಕಂದಕವನ್ನು ಹೆಚ್ಚಿಸಿದೆ. ಇಡೀ ಮನುಕುಲವನ್ನು ಪ್ರಸ್ತುತ ಸಂದರ್ಭದಲ್ಲಿ ಭ್ರಾತೃತ್ವ, ಸಮಾನತೆ, ಸ್ವಾತಂತ್ರ್ಯ ಮತ್ತು ಸಬಲೀಕರಣದೆಡೆಗೆ ಮುನ್ನಡೆಸುವ ನಿಟ್ಟಿನಲ್ಲಿ ಬುದ್ಧಮಾರ್ಗ ಮತ್ತು ಭೀಮಸಂದೇಶ ಪ್ರಸ್ತುತವಾಗಿದೆ. ಇಂದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸಾಮಾಜಿಕವಾಗಿ ಹೀನಾಯ ಸ್ಥಿತಿಯಲ್ಲಿದ್ದಾರೆ. ತುಳಿತಕ್ಕೊಳಗಾದ ಈ ವರ್ಗಗಳು ರಾಜಕೀಯವಾಗಿಯೂ ಇಂದು ಮಾರುಕಟ್ಟೆ ಶಕ್ತಿಗಳ ಹುನ್ನಾರದಿಂದಾಗಿ ಅತಂತ್ರರಾಗಿದ್ದಾರೆ.
ಶ್ರೀನಿವಾಸ ಡಿ. ಪ್ರಾಜೆಕ್ಟ್ ಫೆಲೊ, ಯುಜಿಸಿ-ಯುಪಿಇ ಫೋಕಸ್ ಏರಿಯ-, ಸಮಾಜಕಾರ್ಯ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ನಿಂಗರಾಜು ಆರ್. ಅತಿಥಿ ಬೋಧಕರು, ಈವನಿಂಗ್ ಮಹಾರಾಜ ಕಾಲೇಜು, ಸಮಾಜಶಾಸ್ತ್ರ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಮಹಾದೇವಸ್ವಾಮಿ ಡಿ. ಸಂಶೋಧನಾ ವಿದ್ಯಾರ್ಥಿ, ಇತಿಹಾಸ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಭುಕ್ತಿ ನಿನಗೆಲ್ಲಿಯದು ? ಭತ್ತ ತಾನೆಲ್ಲಿಯದೋ!
ಎತ್ತಲಿನಗೊಬ್ಬರವೋ ! ಎತ್ತಲಿನ ನೀರೋ! ಭಾಕ್ತಾವಾರಾರ ದುಡಿತದಿನೊ ನಿನಗಾಗಿಹುದು! ಗುಪ್ತಗಾಮಿನಿಯೊ ಋಣ ಮಂಕುತಿಮ್ಮ ನಮ್ಮೆಲ್ಲರ ಪ್ರಾಣ ಪಕ್ಷಿಗೆ ಪ್ರಾಣವಾಗಿರುವ ಅನ್ನದ, ಅದನ್ನು ತನ್ನ ಬೆವರಿನ ಶ್ರಮದಿಂದ ಬೆಳೆದು ಕೊಡುವ ರೈತನ ಮೇಲೆ ನಮಗಿರುವ ಋಣವನ್ನು ಜಾಗೃತಗೊಳಿಸುವ ಕಗ್ಗದ ಈ ಸಾಲುಗಳು ನಮ್ಮೆಲ್ಲರನ್ನೂ ಸದಾ ಕೃಷಿ, ರೈತಸ್ನೇಹಿಗಳನ್ನಾಗಿಸುತ್ತವೆ. ನಮ್ಮ ಸಮಾಜ ಇಂದು ಬಹಳ ದುಸ್ಥಿತಿಯಲ್ಲಿದೆ ಎನ್ನುವ ಮಾತು ಎಲ್ಲೆಡೆ ಕೇಳಿಬರುತ್ತಿದೆ. ನಮ್ಮ ಸುದ್ದಿ ಮತ್ತು ದೃಶ್ಯ ಮಾಧ್ಯಮಗಳು ಬಿತ್ತರಿಸುತ್ತಿರುವ ಸಮಾಚಾರಗಳನ್ನು ಅವಲೋಕಿಸಿದರೆ ಅದು ಬಹಳ ಮಟ್ಟಿಗೆ ನಿಜವೆನಿಸುತ್ತದೆ. ಪ್ರತಿ ದಿನ ಪತ್ರಿಕೆಗಳ ಮೂರನೆಯ ಪುಟದಲ್ಲಿ ಅಚ್ಚಾಗುತ್ತಿರುವ ಹಾಗು ದೂರದರ್ಶನ ಚಾನಲ್ಗಳು ಬಿತ್ತರಿಸುತ್ತಿರುವ ವಿಷಯಗಳನ್ನು ಗಮನಿಸಿ. ಕಳ್ಳತನ, ಕೊಲೆ, ಸುಲಿಗೆ, ಭ್ರಷ್ಟಾಚಾರ, ಆತ್ಮಹತ್ಯೆ, ಸ್ತ್ರೀಯರ ಮೇಲಣ ಅತ್ಯಾಚಾರ (ಇತ್ತೀಚೆಗೆ ಇದು ಗಂಡಸರ ಮೇಲೂ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ), ಮುಂತಾದವೇ ಅಲ್ಲಿ ತುಂಬಿರುತ್ತವೆ.
|
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|