ಪೀಠಿಕೆ:
ವ್ಯಕ್ತಿ ಮತ್ತು ಸಮಾಜದ ನಡುವೆ ಬಿಡಿಸಲಾಗದ ಬಾಂಧವ್ಯ ಇದೆ. ಅವು ಒಂದೇ ನಾಣ್ಯದ ಎರಡು ಮುಖಗಳು. ವ್ಯಕ್ತಿಗಳಿಲ್ಲದೆ ಸಮಾಜವಿಲ್ಲ, ಸಮಾಜವಿಲ್ಲದ ಬದುಕು ಊಹಿಸಲು ಸಾಧ್ಯವಿಲ್ಲ. ಸಮಾಜವೆಂದರೆ, ಮಾನವನ ಸಾಮಾಜಿಕ ಸಂಬಂಧಗಳ ಬಲೆ ಎಂದು ಅರ್ಥೈಸಲಾಗಿದೆ. ಸಮಾಜದ ಅಸ್ತಿತ್ವ, ಉಗಮ ಹಾಗೂ ರಚನೆಯ ಕುರಿತು ಅನೇಕ ವಾದ-ವಿವಾದಗಳಿವೆ. ಆದರೆ ಒಂದು ಮಾತ್ರ ನಿಜ. ಮಾನವ ಸಮಾಜದ ರಚನೆ ಅತ್ಯಂತ ಪುರಾತನವಾದದು. ಕೋಟಿ ಕೋಟಿ ವರ್ಷಗಳ ಹಿಂದೆ ನಿಸರ್ಗ, ಚರಾತರ ವಸ್ತುಗಳು ಪಶು, ಪ್ರಾಣಿ, ಪಕ್ಷಿ, ಜೀವ ರಾಶಿಗಳ ಜೊತೆಗೆ ಮನುಷ್ಯನೂ ಹುಟ್ಟಿದ. ಪ್ರಾಣಿಗಳ ಜೊತೆಗೆ ಅವುಗಳ ಹಾಗೆ ಬದುಕಿದ. ಮಂಗನಿಂದ ಮಾನವ ಎಂದು ನಾವು ಯಾವಾಗಲೂ ಹೇಳುತ್ತೇವೆ.
1 Comment
ಮಾನವನ ವರ್ತನೆ ವಿಚಿತ್ರ. ಅದು ಹಿತವಾಗಿರುವಷ್ಟೇ ಅಹಿತವಾಗಿಯೂ ಇರುತ್ತದೆ. ಮನುಷ್ಯರಲ್ಲಿ ಒಳ್ಳೆಯದರ ಜತೆಗೆ ಕೆಟ್ಟ ಗುಣಗಳೂ ಇರುತ್ತವೆ. ನಾವು ಇತರರನ್ನು ಪ್ರೀತಿಸುತ್ತೇವೆ, ಪೋಷಿಸುತ್ತೇವೆ, ಕಾಪಾಡುತ್ತೇವೆ, ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತೇವೆ. ಅಷ್ಟೇ ಸರಾಗವಾಗಿ ಇತರರ ಮೇಲೆ ಕೋಪಿಸಿಕೊಳ್ಳುತ್ತೇವೆ, ಆಕ್ರಮಣ ಮಾಡುತ್ತೇವೆ; ಹೋರಾಡುತ್ತೇವೆ, ಹೊಡೆಯುತ್ತೇವೆ, ಗಾಯಗೊಳಿಸುತ್ತೇವೆ, ನೋವುಂಟು ಮಾಡುತ್ತೇವೆ. ಹಿಂಸಿಸುತ್ತೇವೆ, ಬೈಯುತ್ತೇವೆ, ಮರ್ಯಾದೆ ಕಳೆಯುತ್ತೇವೆ, ಅವಮಾನಗೊಳಿಸುತ್ತೇವೆ. ಅಷ್ಟೇಕೆ, ಯುದ್ಧ ಮಾಡುತ್ತೇವೆ, ಜನರನ್ನು ಕೊಲ್ಲುತ್ತೇವೆ, ಅಪಾರವಾದ ಕಷ್ಟ ನಷ್ಟಗಳಿಗೆ ಕಾರಣಕರ್ತರಾಗುತ್ತೇವೆ. ನಿಮಗೆ ಆಶ್ಚರ್ಯವಾಗಬಹುದು, ಕಳೆದ 5,600 ವರ್ಷಗಳಲ್ಲಿ ಸುಮಾರು 14,600 ಯುದ್ಧಗಳು ನಡೆದಿವೆಯೆಂದು ಹೇಳಲಾಗಿದೆ. ಕೋಟ್ಯಾಂತರ ಜನರ ಕೊಲೆಯಾಗಿದೆ. ಯಾಕೆ ಹೀಗೆ? ವಿಶ್ವದಲ್ಲಿ ಯಾವ ಪ್ರಾಣಿಯೂ ಅನವಶ್ಯಕವಾಗಿ ಕೊಲ್ಲುವುದಿಲ್ಲ, ಮಾನವರನ್ನು ಬಿಟ್ಟು. ಪ್ರಾಣಿಗಳು ಕೊಲ್ಲುವುದು ಊಟಕ್ಕಾಗಿ, ಮಾನವರು ಕೊಲ್ಲುವುದು ಆಟಕ್ಕಾಗಿ; ಕೆಲವರು ವಿನೋದಕ್ಕಾಗಿ ಬೇಟೆಯಾಡುತ್ತಾರೆ; ಪ್ರಾಣಿಗಳನ್ನು ಕೊಲ್ಲುತ್ತಾರೆ. ಇಂದು ವಿಶ್ವದ ಹಲವೆಡೆ ನಡೆಯುತ್ತಿರುವ ನರಮೇಧಗಳನ್ನು ನೋಡಿದರೆ ಮಾನವ ಎಲ್ಲಾ ಪ್ರಾಣಿಗಳಿಗಿಂತಲೂ ಕಟುಕನೆನಿಸುತ್ತದೆ. ಎಲ್ಲೆಡೆ ನಡೆಯುತ್ತಿರುವ ಭಯೋತ್ಪಾದಕರ ಮತ್ತು ಆತ್ಮಹತ್ಯೆ ದಳದವರ ಘೋರ ಕೃತ್ಯಗಳನ್ನು ಗಮನಿಸಿದರೆ ಮಾನವನಿಗಿಂತ ಹಿಂಸ್ರ ಪ್ರಾಣಿ ಇನ್ನೊಂದಿದೆಯೆ ಎನಿಸುತ್ತದೆ. ಮಾನವರಲ್ಲಿ ಹಿಂಸಾಪ್ರವೃತ್ತಿ ಹುಟ್ಟಿನಿಂದಲೇ ಬಂದಿದೆಯೇನೋ ಅನಿಸುತ್ತದೆ.
ಸಮಾಜಕಾರ್ಯದ ಮೌಲ್ಯಗಳಲ್ಲಿ ನಂಬಿಕೆಯಿಟ್ಟು, ಸಮುದಾಯ ಸಂಘಟನೆಯ ತತ್ವಗಳನ್ನು ಸಮುದಾಯದಲ್ಲಿ ಅಳವಡಿಸುವ ಮೂಲಕ ನಿಜ ಸಮಾಜಕಾರ್ಯವನ್ನು ಆಚರಿಸುತ್ತಿರುವ ಸಮಾನಮನಸ್ಕ ಯುವಜನರ ತಂಡವೇ ಉಸಿರಿಗಾಗಿ ಹಸಿರು. ಸದರಿ ತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿರುವವರೂ ಸಹ ವೃತ್ತಿಪರ ಸಮಾಜಕಾರ್ಯರ್ತರು ಎಂಬುದು ವಿಶೇಷ. ಮೇಲ್ನೋಟಕ್ಕೆ ಪರಿಸರ ಪ್ರೇಮಿಗಳ ಗುಂಪಾಗಿ ಕಂಡರೂ ಒಳಹೊಕ್ಕು ನೋಡಿದಾಗ ಸಮಾಜಕಾರ್ಯದ ನಿಜವಾದ ಆಚರಣೆ ಅನಾವರಣಗೊಳ್ಳುತ್ತದೆ. ಸಮುದಾಯ ಸಂಘಟನೆಯ ಬಹುಪಾಲು ತತ್ವಗಳನ್ನು ಅಳವಡಿಸಿಕೊಂಡು ಯಶಸ್ಸಿನತ್ತ ಸಾಗುತ್ತಿರುವ ತಂಡಕ್ಕೆ ಸಮಾಜಕಾರ್ಯವೇ ಸ್ಪೂರ್ತಿ. ಸುಸ್ಥಿರ ಅಭಿವೃದ್ಧಿಯಿಂದ ಮಾತ್ರ ಮನುಕುಲದ ಉಳಿವು ಸಾಧ್ಯವೆಂದು ನಂಬಿರುವ ಸದಸ್ಯರು, ತಮ್ಮ ಗುರಿ ಸಾಧನೆಗಾಗಿ ತಮ್ಮಲ್ಲಿರುವ ಅಗಾಧ ಇಚ್ಚಾಶಕ್ತಿಯಲ್ಲಿ ನಂಬಿಕೆಯಿಟ್ಟಿದ್ದಾರೆ. ಹೀಗೆ ತಮ್ಮದೇ ವಿಭಿನ್ನ ಕಾರ್ಯವೈಖರಿಯ ಮೂಲಕ ಮನೆಮಾತಾಗಿರುವ ತಂಡದ ಕಾರ್ಯಗಳಲ್ಲಿ ಎದ್ದುಕಾಣುವ ಸಮಾಜಕಾರ್ಯ ಆಚರಣೆಯ ಹೆಗ್ಗುರುತುಗಳನ್ನು ಗುರುತಿಸುವ ಪ್ರಯತ್ನವೇ ಈ ಲೇಖನ.
ದಿ ಬ್ಯಾನ್ಯನ್ ನ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ಟ್ರಸ್ಟ ಜಾಗತೀಕರಣದೊಂದಿಗೆ, ಮಾನಸಿಕ ಆರೋಗ್ಯವೂ ಒಂದು ಪ್ರಮುಖ ಕಳಕಳೀಯ ಕ್ಷೇತ್ರವಾಗಿದೆ ಮತ್ತು ಭಾರತದ ಜನಸಂಖ್ಯೆಯ ಶೇಕಡ 10 ರಿಂದ 12ರಷ್ಟು ಜನರಿಗೆ ಇದರ ನೆರವಿನ ಅವಶ್ಯಕತೆಯಿದೆ. ಇದಕ್ಕಾಗಿ, ನಮ್ಮಲ್ಲಿ ಮಾನಸಿಕ ಅಸ್ವಸ್ಥತೆಗೆ ಕೇವಲ ವೈದ್ಯಕೀಯ ವಿಧಾನದ ಹೆಚ್ಚೆಚ್ಚು ಮನೋವೈದ್ಯರಿದ್ದಾರೆ. ಆದರೆ ಮಾನಸಿಕ ಆರೋಗ್ಯವು ವೈದ್ಯಕೀಯ ವಿಷಯಕ್ಕಿಂತಲೂ ಹೆಚ್ಚಿನದು. ಇದು ಸಾಮಾಜಿಕ ಕಲ್ಪನೆಯೂ ಹೌದು. ವಿವಿಧ ಸಾಮಾಜಿಕ-ಆರ್ಥಿಕ, ರಾಜಕೀಯ, ಕೌಟುಂಬಿಕ ಮತ್ತು ಮಾನಸಿಕ ಪ್ರಕ್ರಿಯೆಗಳು ಮಾನಸಿಕ ಅಸ್ವಸ್ಥೆತೆಗೆ ಕಾರಣವಾಗಿರುತ್ತದೆ. ನಿರ್ಗತಿಕ ಮಹಿಳೆಯರ ಅವಶ್ಯಕತೆಗೆ ಸ್ಪಂದಿಸುವುದಕ್ಕಾಗಿ ದಿ ಬ್ಯಾನ್ಯನ್ 1993 ರಲ್ಲಿ ಚೆನ್ನೈನಲ್ಲಿ ಪ್ರಾರಂಭವಾಯಿತು. ಇದು ಲಾಭದ ಉದ್ದೇಶ ಹೊಂದಿರದ ನೊಂದಾಯಿತ ಸಂಸ್ಥೆಯಾಗಿದೆ, ಇದು ಮಾನಸಿಕ ಅಸ್ವಸ್ಥರಿಗೆ, ಸಮುದಾಯಗಳಲ್ಲಿ ನಿರಾಶ್ರಿತರಾಗಿ ಮತ್ತು ಬಡತನದಿಂದ ಜೀವಿಸುತ್ತಿರುವವರಿಗೆ ಸಮಗ್ರ ಮಾನಸಿಕ ಆರೋಗ್ಯ ಪರಿಹಾರಗಳನ್ನು ಒದಗಿಸುತ್ತದೆ.
ಪ್ರಶಾಂತ್ ನಾಯರ್ ಒಂದಾನೊಂದು ಕಾಲದಲ್ಲಿ ಒಬ್ಬ ಒಳ್ಳೆಯ ರಾಜ ಇದ್ದನಂತೆ. ಅವನು, ಅವನ ರಾಜ್ಯದ ಹಸಿದವರಿಗೆ, ಬಡವರಿಗೆ ಆಹಾರ ಒದಗಿಸಲು ಎಲ್ಲೆಂದರಲ್ಲಿ ಅನ್ನ ಛತ್ರಗಳನ್ನು ಸ್ಥಾಪಿಸಿದ್ದನಂತೆ. ಅವನ ರಾಜ್ಯದಲ್ಲಿ ಹಸಿವಿನ ಸೊಲ್ಲು ಸೋತು ಉಡುಗಿತ್ತಂತೆ. ನಾವೆಲ್ಲರೂ ಎಲ್ಲೋ ಕೇಳಿರಬಹುದಾದ ಒಂದು ಜನಪದ ಕಥೆ ಎಂದುಕೊಂಡಿರಾ ? ಊಹುಂ, ಇದು ನಮ್ಮ ಕಾಲದಲ್ಲೇ ಯಾವುದೇ ಅಡೆತಡೆ ಇಲ್ಲದೆ, ಒಂದು ಪವಿತ್ರ ರಿಚ್ಯುವಲ್ನಂತೆ ನಡೆಯುತ್ತಿರುವ ಒಂದು ಮಹಾನ್ ಅನ್ನಯಜ್ಞದ ಕಥೆ.
ಸ್ನೇಹಿತರೇ,
ಸಮಾಜಕಾರ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಿರಾತಂಕ ತಂಡವು ಹಲವಾರು ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಹಲವಾರು ಸಮಾಜಕಾರ್ಯಕ್ಕೆ ಸಂಬಂಧಿಸಿದ ವಿನೂತನ ಪ್ರಯೋಗಗಳನ್ನು ಚರ್ಚಿಸುವ ಸಲುವಾಗಿ ಸೆಪ್ಟೆಂಬರ್ 4, 2016 ಭಾನುವಾರದಂದು ಬೆಂಗಳೂರಿನಲ್ಲಿ ಸಭೆ ಸೇರಲು ನಿರ್ಧರಿಸಲಾಗಿದೆ. ತಮ್ಮದೇ ಆದ ಭಾಷೆ ಮತ್ತು ಸಂಸ್ಕೃತಿಯನ್ನು ಹೊಂದಿರುವ ಸ್ಥಳೀಯ ಸಮುದಾಯಗಳ ಸಮೂಹವನ್ನು ಬುಡಕಟ್ಟು ಜನಾಂಗ, ಆದಿವಾಸಿ ಸಮಾಜ ಎಂದು ಕರೆಯುತ್ತಾರೆ. ಈ ಸಮುದಾಯಗಳ ಜನರು ತಮ್ಮದೇ ಆದ ಆಚಾರ, ವಿಚಾರ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಪ್ರದಾಯಗಳು, ಸಾಹಿತ್ಯ, ಸಂಗೀತ, ನೃತ್ಯಕಲೆ, ಕುಶಲಕಲೆ ಮುಂತಾದ ಹಲವಾರು ಅಂಶಗಳಿಂದ ಮುಖ್ಯ ಸಾಂಸ್ಕೃತಿಕ ವಾಹಿನಿಯಿಂದ ಭಿನ್ನವಾಗಿರುತ್ತಾರೆ. ಅವರು ಈ ಬುಡಕಟ್ಟು ಜನಾಂಗಗಳಿಗೆ ಅಳವಡಿಸಿಕೊಳ್ಳುವಂತಹ ಅಂತರ ಸಮುದಾಯ ರಚನೆ, ಸಂಸ್ಕಾರಗಳು, ರೀತಿ-ರಿವಾಜು, ವೇಷ-ಭೂಷಣ, ಆಹಾರ-ಪಾನೀಯ ಪದ್ಧತಿಗಳು, ಹವ್ಯಾಸಗಳು, ಅಭ್ಯಾಸಗಳನ್ನು ಹೊಂದಿರುತ್ತಾರೆ. ಈ ಕಾರಣಗಳಿಗಾಗಿ ಅವರು ಇತರೆ ಸಾಂಸ್ಕೃತಿಕ ಸಮುದಾಯಗಳಿಂದ, ಸಮಾಜಗಳಿಂದ ಬೇರೆಯದೇ ಆದ ಜೀವನ ಪದ್ಧತಿಯನ್ನು ಅನುಸರಿಸುತ್ತಾರೆ. ಕರ್ನಾಟಕದಲ್ಲಿ ಇಂತಹ ಅನೇಕ ಸಮುದಾಯಗಳು, ಸಮಾಜಗಳು ಅಲ್ಲಲ್ಲಿ ಕಾಣಸಿಗುತ್ತವೆ. ಅವುಗಳಲ್ಲಿ ಕಾಡುಗೊಲ್ಲರು, ಕೊರಗರು, ಕುರುಬರು, ಜೇನುಕುರುಬರು, ವಡ್ಡರು, ಮ್ಯಾಸನಾಯಕರು ಹೀಗೆ ಅನೇಕ ಬುಡಕಟ್ಟು ಜನಾಂಗಗಳನ್ನು ಗುರುತಿಸಬಹುದಾಗಿದೆ. ಇಂತಹ ಬುಡಕಟ್ಟು ಜನಾಂಗಗಳಲ್ಲಿ ಲಂಬಾಣಿ ಬುಡಕಟ್ಟು ಜನಾಂಗವೂ ಒಂದು.
ಸಾರಾಂಶ
ಪ್ರತಿಯೊಂದು ರಾಷ್ಟ್ರ, ಸಮಾಜ, ವ್ಯಕ್ತಿಗಳ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣವು ಒಂದು ಪ್ರಮುಖ ಸಾಧನವಾಗಿದೆ. ಶಿಕ್ಷಣದ ಹಂತಗಳಲ್ಲಿ ಪದವಿ-ಪೂರ್ವ ಶಿಕ್ಷಣ ಹಂತದ ನಂತರ ಬರುವ ಶಿಕ್ಷಣವೇ ಉನ್ನತ ಶಿಕ್ಷಣ ಅಥವಾ ವಿಶ್ವವಿದ್ಯಾಲಯ ಶಿಕ್ಷಣವೆನ್ನುತ್ತೇವೆ. ಈ ಉನ್ನತ ಶಿಕ್ಷಣವು ಮಾನವ ಜನಾಂಗ ಇಂದು ಎದುರಿಸುತ್ತಿರುವ ಸಂದಿಗ್ಧವಾದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ನೈತಿಕ ಹಾಗು ಆಧ್ಯಾತ್ಮಿಕ ಸಮಸ್ಯೆಗಳ ಬಗ್ಗೆ ಚಿಂತನ-ಮಂಥನ ಮಾಡುವುದರ ಜೊತೆಗೆ ಸೃಜನಾತ್ಮಕ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸುವುದರ ಮೂಲಕ ರಾಷ್ಟ್ರೀಯ ಅಭಿವೃದ್ಧಿಗೆ ತನ್ನ ಕೊಡುಗೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಯೋಚಿಸಿದಾಗ ನಮ್ಮ ಭಾರತ ದೇಶದ ಉನ್ನತ ಶಿಕ್ಷಣವು ಇಂದು ಬಹುತೇಕವಾಗಿ ನಿರುದ್ಯೋಗಿ ಪದವೀಧರರನ್ನು ಸೃಷ್ಟಿಸಿ ಆ ಅಭ್ಯರ್ಥಿಗಳು ಕೇವಲ ಪರೀಕ್ಷೆಗೆ ಸಂಬಂಧಪಟ್ಟ ಜ್ಞಾನವನ್ನು ಮಾತ್ರ ಪಡೆಯುವಂತೆ ಮಾಡುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶದ ಕೆಲವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅತ್ಯಾಧುನಿಕ ಎಲ್ಲಾ ಸೌಲಭ್ಯಗಳನ್ನು ಪಡೆದಿದ್ದರೆ, ಇನ್ನೂ ಕೆಲವು ವಿಶ್ವವಿದ್ಯಾಲಯಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದು ಒಂದು ದೊಡ್ಡ ವೈಪರೀತ್ಯವಾಗಿದೆ. ಇನ್ನೂ ಈ ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತವು ಪ್ರಪಂಚದ ಕೆಲವು ರಾಷ್ಟ್ರಗಳಿಗೆ ಹೋಲಿಸಿದಾಗ ನಮ್ಮ ಒಟ್ಟು ದಾಖಲಾತಿಯ ಅನುಪಾತ ತುಂಬಾ ಕಡಿಮೆಯಿದೆ ಹಾಗೂ ಕ್ಯೂ ಎಸ್ ನ ಶ್ರೇಷ್ಠ ಮಟ್ಟದ ವಿಶ್ವವಿದ್ಯಾಲಯದ ರ್ಯಾಂಕ್ನಲ್ಲಿ ನಮ್ಮ ದೇಶದ ವಿಶ್ವವಿದ್ಯಾಲಯಗಳು ತುಂಬಾ ಕೆಳಮಟ್ಟದಲ್ಲಿವೆ ಹಾಗೂ ಗುಣಾತ್ಮಕ ಶಿಕ್ಷಣ ಸಂಸ್ಥೆಗಳು ರ್ಯಾಂಕ್ಗೆ ಹೋಲಿಕೆ ಮಾಡಿದಾಗ ಭಾರತ ಕೆಳಮಟ್ಟದ ರ್ಯಾಂಕ್ನಲ್ಲಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಲೇಖನವು ನಮ್ಮ ಭಾರತದ ಶಿಕ್ಷಣದ ರಚನೆ, ದಾಖಲಾತಿ, ಸಮತೆ, ಗುಣಾತ್ಮಕತೆ, ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತ, ಸಂಶೋಧನೆಗಳ ಅಭಿವೃದ್ಧಿ ವಿಶ್ಲೇಷಣೆ ಮತ್ತು ಉನ್ನತ ಶಿಕ್ಷಣದ ಪ್ರಮುಖ ಸಮಸ್ಯೆಗಳಿಗೆ ಪರಿಹಾರಗಳ ಪೂರಕವಾದ ಅಂಶಗಳನ್ನು ಇಲ್ಲಿ ಅವಲೋಕಿಸಲಾಗಿದೆ. ತಿರುಳು
ಸಮಾಜಕಾರ್ಯ ಸ್ನಾತಕೋತ್ತರ ಪದವಿ ಮತ್ತು ಸಂಶೋಧನೆಯ ಹಿನ್ನೆಲೆ ಇರುವ ಡಾ.ಸಿ.ಆರ್.ಗೋಪಾಲ ಸಮಾಜಕಾರ್ಯದ ತಾತ್ತ್ವಿಕ ಸಿದ್ಧಾಂತ-ಶರಣರ ಮತ್ತು ದಾಸರ ಜೀವನ ದೃಷ್ಟಿ ಎಂಬ ಸಂಶೋಧನಾತ್ಮಕ ಕೃತಿಯನ್ನು ರಚಿಸಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಪ್ರಕಟಿಸಿರುವ ಈ ಕೃತಿಗೆ ಡಾ. ಎಚ್.ಎಂ. ಮರುಳಸಿದ್ಧಯ್ಯನವರು ಸಮಾಜಕಾರ್ಯದ ತಾತ್ತ್ವಿಕ ಸಿದ್ಧಾಂತಕ್ಕೊಂದು ತಿದ್ದುಪಡಿ ಎಂಬ ತಲೆಬರಹದಡಿ ಮುನ್ನುಡಿಯನ್ನು ನೀಡಿದ್ದಾರೆ. ಮಾನವನನ್ನು ಪ್ರಗತಿಪಥದೆಡೆಗೆ ಕೊಂಡೊಯ್ಯುವ ಪ್ರಮುಖ ಸಾಧನವೇ ಜ್ಞಾನ. ಇಂತಹ ಜ್ಞಾನವನ್ನು ಮಾನವನು ಹುಟ್ಟಿನಿಂದಲೇ ಹಂತ-ಹಂತವಾಗಿ ಕುಟುಂಬದ ಸದಸ್ಯರೊಂದಿಗೆ ನೆರೆಹೊರೆಯವರೊಂದಿಗೆ ಕಲಿತಿರುತ್ತಾನೆ. ಹೀಗೆ ಸಂಪಾದಿಸಿದ ಜ್ಞಾನವನ್ನು ವ್ಯವಸ್ಥಿತ ರೀತಿಯಲ್ಲಿ ಮಾರ್ಪಡಿಸಿ ಅಡಗಿರುವ ಜ್ಞಾನ ಸಂಪತ್ತಿನ ಪ್ರಭೆಯನ್ನು ಹೊರತಂದು ಪ್ರಜ್ವಲಿಸುವಂತೆ ಮಾಡುವದೇ ಶಿಕ್ಷಣವಾಗಿದೆ. ಶಿಕ್ಷಣ ಎಂಬುದು ಇಂದು ನಿನ್ನೆಯದಲ್ಲ, ಮಾನವನ ಉಗಮದೊಂದಿಗೇನೇ ಹುಟ್ಟಿಕೊಂಡ ವ್ಯವಸ್ಥೆಯಾಗಿದೆ. ಔಪಚಾರಿಕ ಶಿಕ್ಷಣದ ವಿಧಾನವೇ ವ್ಯವಸ್ಥಿತ ಕ್ರಮಬದ್ಧವಾದ ಜ್ಞಾನದ ಜೋಡಣೆಯಾಗಿದೆ. ವ್ಯಕ್ತಿಯ ಚಟುವಟಿಕೆ, ವರ್ತನೆ, ನಡವಳಿಕೆ ಹಾಗೂ ಅವನು ಪಡೆದಿರುವ ಜ್ಞಾನವನ್ನು ಪ್ರತಿನಿಧಿಸುವುದಲ್ಲದೆ, ಸಮಾಜದಲ್ಲಿ ಅವನ ಸ್ಥಾನಮಾನ ಮುಂತಾದ ಅವನ ಸಂಪೂರ್ಣ ವ್ಯಕ್ತಿತ್ವದ ಪ್ರತೀಕವಾಗುತ್ತದೆ. ಆದ್ದರಿಂದ ವ್ಯಕ್ತಿಯು ಮೌಲ್ಯಯುತವಾದ ಸ್ಥಾನಮಾನ ಹೊಂದಬೇಕಾದರೆ, ನಯ, ವಿನಯ, ಗುರು ಹಿರಿಯರನ್ನು ಗೌರವಿಸುವುದು ಮುಂತಾದ ಸದ್ಗುಣಗಳು ವ್ಯಕ್ತಿಯಲ್ಲಿ ನೆಲೆಸುವಂತೆ ಮಾಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ಅಸತ್ಯದಿಂದ-ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವುದಾಗಿದೆ.
ರವೀಂದ್ರನಾಥ ಚಕ್ರವರ್ತಿ. ಎಸ್. ಪಿ.ಎಚ್.ಡಿ. ವಿದ್ಯಾರ್ಥಿ, ಸಮಾಜಶಾಸ್ತ್ರ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ-577451 ಡಾ. ಚಂದ್ರಶೇಖರ್ ಪ್ರಾಧ್ಯಾಪಕರು, ಸಮಾಜಶಾಸ್ತ್ರ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ-577451 ಸಮಾಜ ವಿಜ್ಞಾನಿಗೆ ಸಮಾಜ ಕಾರ್ಯದ್ದೇ ಧ್ಯಾನ. ತಾನಿರುವ ಸ್ಥಳ, ಊರು ಅಷ್ಟೆ ಏಕೆ ಇಡೀ ರಾಷ್ಟ್ರವೇ ಸ್ವಚ್ಚವಾಗಿರಬೇಕೆಂದು ಶ್ರಮಿಸುತ್ತಾನೆ. ಅದಕ್ಕೆ ಭೂಮಿಕೆಯಾಗಿ ತನ್ನ ಅಂತರಂಗ ಬಹಿರಂಗಗಳಲ್ಲಿ ನಿಷ್ಪಕ್ಷಪಾತವನ್ನು, ನಿಸ್ವಾರ್ಥ ಸೇವೆಯ ಕಂಕೈರ್ಯವನ್ನು ಮೈಗೂಡಿಸಿಕೊಂಡು ಸಮಾನತೆಯ ಮಂತ್ರವನ್ನು ಜಪಿಸುತ್ತಾನೆ. ತನ್ನನ್ನು ತಾನು ಮೊದಲು ಬದಲಾವಣೆಗೆ ಒಡ್ಡಿಕೊಳ್ಳುತ್ತಾನೆ. ಆಗ ಮಾತ್ರ ನಿಜವಾದ ಸಮಾಜ ಸೇವಕನಾಗಲು ಶಕ್ತನಾಗುತ್ತಾನೆ. ಕೆಲಮೊಮ್ಮೆ ಪ್ರಯೋಗದ ಬಲಿಪಶುವೂ ಆಗಬೇಕಾಗುತ್ತದೆ. ಆದರೂ ಎದೆಗುಂದದೆ ಸಿಂಹ ಸದೃಶವಾದ ಗುಂಡಿಗೆಯನ್ನು ಹೊಂದಿರಬೇಕಾಗಿರುತ್ತದೆ. ಹೀಗಿದ್ದರೆ ಮಾತ್ರ ಭಯೋತ್ಪಾದನೆಯಂತೆ ವರ್ತಿಸುತ್ತಿರುವ ಜಾತಿ ವ್ಯವಸ್ಥೆಯನ್ನು, ರಸ್ತೆಗೆ ಕಸ ಎಸೆಯುತ್ತಿರುವ ನಾಗರೀಕ ಸಂಸ್ಕೃತಿಯನ್ನು, ಸಮಾಜಕಾರ್ಯವೆಂದರೆ ತರಗತಿಯಲ್ಲಿ ಬೋಧಿಸುವುದು ಎಂದು ಭ್ರಮಿಸಿರುವವರನ್ನು, ಸಂಪತ್ತನ್ನು ಕ್ರೋಡೀಕರಿಸಿಕೊಂಡು ಅಧಿಕಾರದ ಮಧವೇರಿದವರನ್ನು, ಯೋಜನೆಗಳ ನೆಪದಲ್ಲಿ ಹಣ ಸ್ವಾಹ ಮಾಡುತ್ತಿರುವ ನುಂಗಣ್ಣರನ್ನು ಈ ಮೊದಲಾದ ಎಲ್ಲಾ ವರ್ಗದವರ ಮನಸ್ಸನ್ನು ಒಳ್ಳೆಯ ಕಾರ್ಯಕ್ಕೆ ಅಣಿಗೊಳಿಸಲು ಸಾಧ್ಯವಿದೆ.
ಸಾರಾಂಶ
ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳ ವಾಸ್ತವ್ಯವಿರುವ ಕುಲಾಲರ ಯಾನೆ ಮೂಲ್ಯರ ಬಗೆಗಿನ ಒಂದು ಅಧ್ಯಯನವು ಇದಾಗಿದೆ. ಕುಲಾಲ ಸಮುದಾಯದಲ್ಲಿ ಒಳಜಾತಿಗಳಿದ್ದು ಅವು ಅವುಗಳದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದರಲ್ಲಿ ಶೋಷಣೆಗೊಳಪಟ್ಟ ಉಪ್ಯಾನ್ ಒಳಜಾತಿಯ ಬಗೆಗೆ ನಡೆಸಿದ ಅಧ್ಯಯನವು ಇದಾಗಿದ್ದು, ಕುಲಾಲ ಸಮಾಜದ ತಪ್ಪು ಕಲ್ಪನೆಯನ್ನು ಹೊಡೆದೋಡಿಸುವಲ್ಲಿ ಈ ಅಧ್ಯಯನದ ಪಾತ್ರ ಪ್ರಮುಖವಾದುದೂ, ಕುಲಾಲ ಸಮುದಾಯದ ಹಿರಿಯರಲ್ಲಿ, ಮುಖಂಡರಲ್ಲಿ ಹಾಗೂ ಕುಲಾಲ ಸಮಾಜದ ಉಪ್ಯಾನ್ ಒಳಜಾತಿಯ ಹೆಣ್ಣು ಮಕ್ಕಳಿಂದ ಅಧ್ಯಯನಕ್ಕೆ ಬೇಕಾದ ಮಾಹಿತಿಯನ್ನು ಸಂದರ್ಶಕ ಸ್ನೇಹಿ ಸಂದರ್ಶನದ ಮೂಲಕ ಸಂಗ್ರಹಿಸಲಾಗಿದೆ. ಈ ಅಧ್ಯಯನವು ಮುಂದಿನ ಅಧ್ಯಯನಕ್ಕೆ ಪೂರಕವಾದ ಪ್ರಶ್ನೆ ಮತ್ತು ವೇದಿಕೆಯನ್ನು ಒದಗಿಸಿರುವುದರಿಂದ ಇದರ ಅಧ್ಯಯನ ವ್ಯಾಪ್ತಿ ವಿಶಾಲವಾದುದಾಗಿದೆ. ಮೂಢನಂಬಿಕೆಯನ್ನು ಮೀರಿದ ಕೆಲವು ಕುಲಾಲ ಕುಟುಂಬಗಳು ಈಗಲೂ ಉತ್ತಮ ಜೀವನವನ್ನು ನಡೆಸುತ್ತಿರುವುದರಿಂದ ಮುಂದೆ ಈ ಮೌಢ್ಯತೆಯು ತೆರೆಮರೆಗೆ ಸರಿಯಬಹುದೆಂದು ಲೇಖಕರ ಅಭಿಪ್ರಾಯದಾಗಿದೆ. ಪ್ರಮುಖ ಪದಗಳು:- ಒಳಜಾತಿ, ಉಪ್ಯಾನ್ ಬರಿ, ಉಪ್ಪು, ಸಾಧುಸ್ವಭಾವ, ತುಳು ಡಾ. ರೂತ್ ಮನೋರಮಾರೊಂದಿಗಿನ ನನ್ನ ಒಡನಾಟವು 1973 ರಿಂದ ಪ್ರಾರಂಭವಾಯಿತು. ನನ್ನ ಹಳೆಯ ವಿದ್ಯಾರ್ಥಿಯಾದ ಆರ್.ಎಸ್. ಅನ್ಬರಾಸನ್ರವರು ರೂತ್ ಮನೋರಮಾ ಮತ್ತು ಅವರ ಸಹಪಾಠಿಯಾದ ಕರುಣಾ ಡೇವಿಡ್ರನ್ನು ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ನಲ್ಲಿ ನನಗೆ ಪರಿಚಯಿಸಿದರು. ರೂತ್ ಮತ್ತು ಕರುಣಾರವರು ಸ್ನೇಹಶೀಲ ಗುಣದವರಾದ್ದರಿಂದ ನಮ್ಮಲ್ಲಿ ಒಳ್ಳೆಯ ಗೆಳೆತನ ಬೆಳೆಯಿತು. ರೂತ್ರವರು ವಿದ್ಯಾರ್ಥಿಯಾಗಿದ್ದಾಗಿನಿಂದಲೇ ತಮ್ಮಲ್ಲಿ ಅಪಾರ ಆತ್ಮವಿಶ್ವಾಸವನ್ನು ಬೆಳಸಿಕೊಂಡಿದ್ದರಿಂದ ಮುಂದೊಂದು ದಿನ ಇವರು ಜನ ನಾಯಕರಾಗುತ್ತಾರೆಂದು ನನಗೆ ಯಾವಾಗಲೂ ಅನ್ನಿಸುತ್ತಿತ್ತು. ಅವರು ಎಲ್ಲಾ ಸಾಮಾಜಿಕ ಸಮಸ್ಯೆಗಳ ಮೇಲೆ ನಿರ್ದಿಷ್ಟ ದೃಷ್ಟಿಕೋನಗಳನ್ನು ಹೊಂದಿದ್ದರು ಮತ್ತು ತಮ್ಮ ಅಭಿಪ್ರಾಯಗಳನ್ನು ದೃಢ ಸಂಕಲ್ಪದೊಂದಿಗೆ ಅಭಿವ್ಯಕ್ತಿಗೊಳಿಸಿದರು. ರೂತ್ರವರು ಸುಮಾರು ನಾಲ್ಕು ದಶಕಗಳಿಂದ ದಲಿತ ಮಹಿಳೆಯರ ಸಬಲೀಕರಣ ಮತ್ತು ದಲಿತ ಚಳುವಳಿಯ ಕೇಂದ್ರ ಬಿಂದುವಾಗಿದ್ದಾರೆ. ಅವರ ಕಾರ್ಯಕ್ಷೇತ್ರವು ರಾಷ್ಟ್ರೀಯ ಎಲ್ಲೆಯ ಆಚೆಗೂ ವಿಸ್ತರಣೆಗೊಂಡಿದೆ. ಇವರು ಶೋಷಿತರ ವಿಮೋಚನಾ ಕಾರ್ಯಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲೂ ಸಕ್ರಿಯರಾಗಿದ್ದಾರೆ. ದಲಿತರಿಗಾಗಿ ಮತ್ತು ಮಹಿಳೆಯರ ವಿಮೋಚನೆಗಾಗಿ ಇವರು ನಡೆಸಿದ ಮತ್ತು ನಡೆಸುತ್ತಿರವ ಹೋರಾಟಗಳಿಂದ ಇವರಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ ಮತ್ತು ಇದ್ದಕ್ಕಾಗಿ ಇವರಿಗೆ ಪ್ರತಿಷ್ಠಿತ ರೈಟ್ ಲೈವ್ಲಿವುಡ್ ಪ್ರಶಸ್ತಿಯನ್ನು ನೀಡಲಾಗಿದೆ. ಸದ್ಯದಲ್ಲೇ ಇವರಿಗೆ ಭಾರತ ಸರ್ಕಾರದಿಂದ ಸೂಕ್ತ ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ನಾನು ಖಚಿತವಾಗಿ ಹೇಳುತ್ತೇನೆ. ತನ್ನ ಗುರಿ ಸಾಧನೆಯಲ್ಲಿ ರೂತ್ ಮನೋರಮಾರವರ ಆಶಾವಾದಕ್ಕೆ ಮುಂದೊಂದು ದಿನ ಶಾಂತಿ ನೊಬೆಲ್ ಪ್ರಶಸ್ತಿಯು ಲಭಿಸುವುದರಲ್ಲಿ ಸಂದೇಹವಿಲ್ಲ.
ಡಾ. ಟಿ.ಕೆ. ನೈಯ್ಯರ್ ಸಮಾಜಕಾರ್ಯದ ಪ್ರಾಧ್ಯಾಪಕರು ಮತ್ತು ಮಾಜಿ ಪ್ರಾಂಶುಪಾಲರು, ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್. ಪೀಠಿಕೆ:
ಭಾರತೀಯ ಸಮಾಜವು ಸಾಂಸ್ಕೃತಿಕವಾಗಿ ಬಹುಮುಖಿ ಸಮಾಜವಾಗಿದ್ದು, ತನ್ನದೆ ಆದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಹಾಗೆಯೇ ಭಾರತದಲ್ಲಿ ವಿಭಿನ್ನ ಧಾರ್ಮಿಕ ಸಮೂಹಗಳು ಅಸ್ತಿತ್ವದಲ್ಲಿದ್ದು, ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿವೆ. ಭಾರತೀಯ ಸಮಾಜವು ಸ್ತರವಿನ್ಯಾಸಯುಕ್ತ ಸಮಾಜವಾಗಿದ್ದು ಏಣಿಶ್ರೇಣಿಗಳಿಂದ, ನಿರ್ಬಂಧಗಳಿಂದ ಮತ್ತು ಅಸಮಾನತೆಯಿಂದ ಕೂಡಿದೆ. ಈ ಅಸಮಾನತೆಯ ಮೂಲ ಜಾತಿ ಸಮೂಹಗಳಲ್ಲಿರುವ ವೈವಿಧ್ಯತೆಗೆ ಕಾರಣವಾಗಿದೆ. ಭಾರತದಲ್ಲಿ ಗ್ರೀಕರು/ಹೂಣರು, ಕುಶಾನರು, ಮಂಗೋಲರು, ತುರುಕರು, ಮೊಘಲರು ಮುಂತಾದ ಜನಾಂಗೀಯ ಮೂಲನಿವಾಸಿ, ಆದಿವಾಸಿ ಬುಡಕಟ್ಟು ಜನಾಂಗದೊಂದಿಗೆ ಸಮ್ಮಿಶ್ರಣಗೊಂಡಿದ್ದಾರೆ. ಭಾರತದ ಮೂಲನಿವಾಸಿಗಳಾಗಿ ಆದಿವಾಸಿ ಬುಡಕಟ್ಟು ಜನಾಂಗದವರನ್ನು ಗುರುತಿಸಲಾಗಿದೆ. ಭಾರತದಲ್ಲಿ 461 ಬುಡಕಟ್ಟು ಸಮುದಾಯಗಳಿವೆ. 2011ರ ಜನಗಣತಿಯಂತೆ 9.50 ಕೋಟಿ ಜನಸಂಖ್ಯೆ ಬುಡಕಟ್ಟು ಸಮುದಾಯದವರಾಗಿದ್ದಾರೆ. ಭಾರತದಲ್ಲಿ ಕೆಲವು ಬುಡಕಟ್ಟಿನ ಜನರು ಗ್ರಾಮ-ನಗರ ಸಂಸ್ಕೃತಿಗೂ ಸೇರಿಕೊಳ್ಳದೆ ತಮ್ಮದೇ ಆದ ವಿಶಿಷ್ಠ ಸಂಸ್ಕೃತಿ ಪರಂಪರೆಯ ವಿಭಿನ್ನತೆಯನ್ನು ಹೊಂದಿದ್ದಾರೆ. ಪ್ರೊ|| ಕೇಶವಮೂರ್ತಿ ಟಿ.ಎನ್. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗೇಪಲ್ಲಿ ಅಪರಿಮಿತ ಮಾನವ ಸಂಪನ್ಮೂಲವುಳ್ಳ ಭಾರತದಂತಹ ಸಂಪ್ರದಾಯಸ್ಥ ರಾಷ್ಟ್ರದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಡತನದ ಬೇಗೆಯಲ್ಲಿ ಸಿಲುಕಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮಾತ್ರ ಮರೀಚಿಕೆಯೇ ಆಗಿದೆ. ಇತ್ತೀಚಿಗಷ್ಟೆ ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆಯ ಸ್ಥಿತಿ ಗತಿ ಕುರಿತು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿರುವ ವರದಿಯನ್ನು ಬಿಡುಗಡೆ ಮಾಡಿದ ಪ್ರಧಾನ ಮಂತ್ರಿಗಳಾದ ಡಾ|| ಮನಮೋಹನ್ ಸಿಂಗ್ ಇದೊಂದು ರಾಷ್ಟ್ರೀಯ ಅಪಮಾನ ಎಂದು ಕರೆದಿದ್ದಾರೆ. ವಿಪರ್ಯಾಸದ ಸಂಗತಿಯೆಂದರೆ ಅವರದೇ ನೇತೃತ್ವದ ಪೌಷ್ಟಿಕತೆಯ ಸವಾಲುಗಳಿಗೆ ಸಂಬಂಧಿಸಿದ ಪ್ರಧಾನಮಂತ್ರಿ ರಾಷ್ಟ್ರೀಯ ಮಂಡಳಿ ಕಳೆದ ಮೂರು ವರ್ಷಗಳಲ್ಲಿ ಸಭೆ ಸೇರಿರುವುದು ಕೇವಲ ಒಂದೇ ಬಾರಿಯಷ್ಟೆ. ರಾಷ್ಟ್ರದಲ್ಲಿ ಐದು ವರ್ಷದೊಳಗಿನ ಶೇ. 42 ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಈ ವರದಿ ಬಹಿರಂಗ ಪಡಿಸಿದೆ. ಇನ್ನೂ ಕೆಲವು ನಂಬಲರ್ಹ ಸಂಸ್ಥೆಗಳ ಅಂದಾಜಿನ ಪ್ರಕಾರ ಈ ಪ್ರಮಾಣವು ಶೇ.52 ರಿಂದ 54 ರಷ್ಟಿದೆ (ಡಾ||. ಆರ್. ಬಾಲಸುಬ್ರಹ್ಮಣ್ಯಂ 2012).
ಆಧುನಿಕ ಸಮಾಜಕಾರ್ಯವನ್ನು ಒಂದು ವೃತ್ತಿ ಎಂದು ಭಾವಿಸಲಾಗುತ್ತದೆ. ವೃತ್ತಿಗೆ ಇರಬೇಕಾದ ಕೆಲವು ಅತೀ ಮುಖ್ಯವಾದ, ಅನಿವಾರ್ಯವಾದ ಹಾಗೆಯೇ ವಿಶಿಷ್ಟವಾದ ವೈಲಕ್ಷಣ್ಯಗಳು ಇರಬೇಕು. ಬೋಧನೆ, ಅನುಸಂಧಾನ, ಪ್ರಯೋಗ, ವಿಧಾನ-ತಂತ್ರಗಳ, ಮೌಲ್ಯ ಸೂತ್ರಗಳ, ತತ್ತ್ವಾದರ್ಶ-ಸಿದ್ಧಾಂತಗಳ ರೂಪಣಿಕೆ, ಅನುಷ್ಠಾನ ಕ್ಷೇತ್ರಗಳ ನಿರ್ಧಾರ, ಸಮಾಜಕಾರ್ಯದಲ್ಲಿ ತೊಡಗಿರುವವರು-ಪ್ರಶಿಕ್ಷಣಾರ್ಥಿಗಳು, ಪ್ರಶಿಕ್ಷಕರು, ಕಾರ್ಯಕರ್ತರು ಮುಂತಾದವರೆಲ್ಲರೂ ಹೊಂದಿರಲೇಬೇಕಾದ ಸೂಕ್ತ ವ್ಯಕ್ತಿತ್ವ, ಇತ್ಯಾದಿಗಳೆಲ್ಲವುಗಳ ಜೊತೆಗೆ, ಸಮಾಜಕಾರ್ಯದಲ್ಲಿ ನಿರತರಾಗಿರುವವರು ತುಂಬಿದ ಆಸಕ್ತಿಯಿಂದ, ಬದ್ಧನಿಷ್ಠೆಯಿಂದ ನಿರಂತರವಾಗಿ ಭಾಗವಹಿಸಲು ಸೂಕ್ತವಾದ ಪ್ರಯೋಗಶಾಲೆಯು ಅತ್ಯಗತ್ಯ. ಹೋಲಿಕೆ ಅಷ್ಟು ಸರಿಯಲ್ಲ ಎಂಬ ಅಭಿಪ್ರಾಯ ಇದ್ದರೂ ವೈದ್ಯಶಾಸ್ತ್ರದ ಶಾಲೆಗೆ ಹೇಗೆ ಒಂದು ಆಸ್ಪತ್ರೆ ಬೇಕೊ, ಇಂಜಿನಿಯರಿಂಗ್ ಶಾಲೆಗೆ ಹೇಗೆ ಒಂದು ಕಾರ್ಯಾಗಾರ (Workshop) ಬೇಕೊ, ಸಮಾಜಕಾರ್ಯ ಶಾಲೆಗೂ ಒಂದು ಪ್ರಯೋಗಾಲಯ ಬೇಕೇಬೇಕಾಗುತ್ತದೆ.
ಸಮಾಜಕಾರ್ಯ ಅಧ್ಯಾಪನದಿಂದ ನಿವೃತ್ತಿ ಹೊಂದಿಯೇ ಹದಿನಾರು ವರ್ಷಗಳು ಉರುಳಿದವು. ನನ್ನ ಜೀವನವನ್ನು ಸಿಂಹಾವಲೋಕನ ಮಾಡಿದರೆ ಕಾಣುವುದೇನು? ಸಮಾಜಕಾರ್ಯದ ಮತ್ತು ನನ್ನ ಜೀವನಾನುಭವದ ಹೆಜ್ಜೆಗುರುತುಗಳೇನು? ಈ ಪ್ರಶ್ನೆಗಳ ಸುತ್ತಲೇ ತಿರುಗುತ್ತಿರುವ ಸ್ಥೂಲಾವಲೋಕನ ಈ ಮುಂದಿನದ್ದು.
ಪ್ರವೇಶ ಆಕಸ್ಮಿಕ ಸಮಾಜಕಾರ್ಯಕ್ಕೆ ನಾನು ಪ್ರವೇಶಿಸಿದ್ದು ಆಶ್ಚರ್ಯಕರ ರೀತಿಯಲ್ಲಿ, ಬಹುಶಃ ನನ್ನ ಅರಿವಿಲ್ಲದಂತಯೇ ಗುರುತಿಸಬಹುದಾದರೆ ಸದಾಶ ಯ ಹೊಂದಿದ್ದ ಹಿರಿಯರೊಬ್ಬರ ಸಲಹೆ ಸೂಚನೆಯ ಮೇರೆಗೆ, ಕನ್ನಡ ಸಾಹಿತ್ಯದ ಆರಾಧಕ ಅಥವಾ ಕೃಷಿಕ ಆಗಬೇಕು ಎಂಬುದು ನನ್ನ ಅಪೇಕ್ಷೆಯಾಗಿತ್ತು. ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗಲೇ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು, ಕವನ ಪ್ರಬಂಧ ರಚನೆಯಲ್ಲಿ ತೊಡಗಿದ್ದು, ಕನ್ನಡ ಸಾಹಿತ್ಯ ಕೃತಿಗಳನ್ನೇ ಓದುವುದರಲ್ಲಿ ಹೆಚ್ಚಿನ ಆಸಕ್ತಿ, ಆಸ್ಥೆಯನ್ನು ತಳೆದಿದ್ದೆ. ಅಂದಿನ ಮದ್ರಾಸು ಪ್ರಾಂತ್ಯಕ್ಕೆ ಎಸ್.ಎಸ್.ಎಲ್.ಸಿ., ಪರೀಕ್ಷೆಯಲ್ಲಿ ಕನ್ನಡದಲ್ಲಿ ಪ್ರಥಮ ಸ್ಥಾನ ಪಡೆದಿದ್ದೆ. ನನ್ನ ಗುರುಗಳೂ ನನಗೆ ಪ್ರೋತ್ಸಾಹದ ನೆರವು ನೀಡುತ್ತಿದ್ದರು. ಇದೂ ನನ್ನ ಕನ್ನಡ ದುಡಿಮೆಗೆ ಒತ್ತಾಸೆಯಾಯ್ತು. (ಆರ್ಥಿಕ ಅನನುಕೂಲ ಮತ್ತು ಇತರ ತೊಂದರೆಗಳ ಕಾರಣದಿಂದ ಒಂದು ವರ್ಷ ನನ್ನ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದಿದ್ದುದರಿಂದ ಪತ್ರಿಕೋದ್ಯಮಿಯಾಗಿ ಹುಬ್ಬಳ್ಳಿ, ದಾವಣಗೆರೆ ನಗರಗಳಲ್ಲಿ ಕೆಲಸ ಮಾಡಬೇಕಾಯ್ತು) ಪ್ರೌಢಶಾಲಾ ಶಿಕ್ಷಣದ ನಂತರ ನನ್ನ ಅಣ್ಣ ಹಿ.ಮ. ನಾಗಯ್ಯನವರ ಸಹಾಯದಿಂದ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಸೇರಿದೆ. ಅಲ್ಲಿ ಓದುವಾಗ ಪ್ರೊ. ಕೆ.ಎಸ್. ಕೃಷ್ಣಮೂರ್ತಿ, ಪ್ರೊ. ಗೋಪಾಲಕೃಷ್ಣ ಅಡಿಗ, ಇಂಗ್ಲೆಂಡಿನ ಡೇವಿಡ್ ಹಾರ್ಸ್ ಬರೋ ಇಂಥವರ ನೆರವು ದೊರೆಯಿತು. ಅಲ್ಲಿಯೇ ಕರುಣಾಮಯಿ ಫಾದರ್ ಮುತಡಂ ಕಷ್ಟಕಾಲದಲ್ಲಿ ನೆರವಾದರು. ಆ ಅಧ್ಯಯನ ಕಾಲದಲ್ಲಿಯೇ ಕನ್ನಡದ ಕೃಷಿ ನಡೆದು ಅಂತಿಮ ಪರೀಕ್ಷೆಯಲ್ಲಿ ಒಂಭತ್ತನೆಯ ರ್ಯಾಂಕ್ ಪಡೆದುದಲ್ಲದೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕನ್ನಡದಲ್ಲಿ ಪ್ರಥಮ ಸ್ಥಾನ ದೊರೆಕಿಸಿಕೊಂಡೆ ಎಂದು ನೆನಪು. ಆದುದರಿಂದಲೂ ಮಹಾರಾಜ ಕಾಲೇಜಿನಲ್ಲಿ ಕನ್ನಡ ಆನರ್ಸ್ ಓದಲು ನನಗೆ ಸಹಜವಾಗಿಯೇ ಅವಕಾಶ ಸಿಕ್ಕಿದುದಲ್ಲದೆ ಮೆರಿಟ್ ಸ್ಕಾಲರ್ಷಿಪ್ ಕೂಡಾ ದೊರೆಯಿತು. ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆ ಎಂಬುದು ಕರ್ನಾಟಕವನ್ನು 1956 ರಿಂದಲೂ ಕಾಡುತ್ತಿರುವ ಬಾಲಗ್ರಹ ಪೀಡೆಯಾಗಿದೆ. ಕರ್ನಾಟಕದ ಹುಟ್ಟಿನೊಂದಿಗೆ ಜನ್ಮತಳೆದ ರೋಗ ಇದಾಗಿದೆ. ವಾಸ್ತವವಾಗಿ ಇದು ಕರ್ನಾಟಕಕ್ಕೆ ವಿಶಿಷ್ಟವಾದ ಸಮಸ್ಯೆಯೇನೂ ಅಲ್ಲ. ಆಂದ್ರಪ್ರದೇಶದಲ್ಲಿ (ತೆಲಂಗಾಣ), ಮಹಾರಾಷ್ಟ್ರದಲ್ಲಿ (ಮರಾಠವಾಡ), ಗುಜರಾತ್ ನಲ್ಲಿ (ಕಚ್ ಪ್ರದೇಶ), ಒರಿಸ್ಸಾದಲ್ಲಿ (ಪಶ್ಚಿಮ ಭಾಗ) ಇಂತಹ ಸಮಸ್ಯೆಗಳು ಇರುವುದು ಕಂಡುಬರುತ್ತದೆ. ಕರ್ನಾಟಕದಲ್ಲಿನ ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆಯನ್ನು ಚಾರಿತ್ರಿಕವಾಗಿ ಪರಿಭಾವಿಸಿಕೊಳ್ಳಬೇಕಾಗುತ್ತದೆ. ಇಂದು ನಾವು ಯಾವ ಜಿಲ್ಲೆಗಳನ್ನು ಅತ್ಯಂತ ಹಿಂದುಳಿದವುಗಳೆಂದು ವರ್ಗೀಕರಿಸುತ್ತಿದ್ದೇವೆಯೋ ಅವು ಒಂದು ರೀತಿಯ ಚಾರಿತ್ರಿಕ ವಿಕಲತೆಗೆ ಒಳಗಾಗಿರುವುದು ಸ್ಪಷ್ಟವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಸಾಹತುಶಾಹಿ ಆಡಳಿತಕ್ಕೆ ಮತ್ತು ಅಭಿವೃದ್ಧಿಗೆ ಒಳಪಡದಿದ್ದ ಪ್ರದೇಶಗಳೇ ಇಂದು ಹಿಂದುಳಿದಿರುವ ಸ್ಥಿತಿಯಲ್ಲಿವೆ.
ಮುನ್ನುಡಿ
ಭಾರತೀಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಶರಣ ಚಿಂತನೆ ಮತ್ತು ಸಮಾಜಕಾರ್ಯದ ತೌಲನಿಕ ಚೌಕಟ್ಟಿನಲ್ಲಿ ನನ್ನೀ ಪ್ರಸ್ತಾವನೆಯನ್ನು ಮಂಡಿಸಲು ಬಯಸುತ್ತೇನೆ. ಸಕಲ ಜೀವಾತ್ಮರಿಗೆ ಬಯಸುವ ಲೇಸಿನ ಮಾರ್ಗವನ್ನು ಹನ್ನೆರಡನೆಯ ಶತಮಾನದ ಶಿವಶರಣರು ಹಿಡಿದರು. ಹತ್ತೊಂಬತ್ತು-ಇಪ್ಪತ್ತನೆಯ ಶತಮಾನದಲ್ಲಿ ರೂಪುತಳೆದ ಆಧುನಿಕ ಸಮಾಜಕಾರ್ಯವು ಮಾನವರ ಕಲ್ಯಾಣ ಮತ್ತು ಅಭ್ಯುದಯವನ್ನು ತನ್ನ ಗುರಿಯಾಗಿಸಿಕೊಂಡಿತು. ಈ ಎರಡೂ ಮಾರ್ಗಗಳ ಗುರಿಯು, ಒಟ್ಟಿನಲ್ಲಿ, ಲೋಕದಲೇಸು, ಒಳಿತು, ಕಲ್ಯಾಣ ಮತ್ತು ಅಭ್ಯುದಯ. ಈ ಎರಡೂ ಮಾರ್ಗಗಳ ಗುರಿಯಾದ ಲೇಸು ಅಂದರೇನು ಎಂಬುದನ್ನು ನಾವು ನಿರ್ವಚಿಸಬೇಕಾಗಿದೆ. ಜೊತೆಗೆ, ಈ ಲೇಸನ್ನು ಅಳೆಯುವುದು ಹೇಗೆ, ಮತ್ತು ಅಳೆಯುವ ಮಾಪಕಗಳಾವುವು, ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ. ಸಮಾಜಕಾರ್ಯಕರ್ತರನ್ನು ಆಯ್ದುಕೊಳ್ಳುವ ಸರಿಯಲ್ಲದ ಕ್ರಮ
ಸಮಾಜಕಾರ್ಯದ ಅವಿಭಾಜ್ಯ ಅಂಗ ಕ್ಷೇತ್ರಕಾರ್ಯ. ಕ್ಷೇತ್ರಕಾರ್ಯವನ್ನು ಪ್ರಾಮುಖ್ಯವಾಗಿರಿಸಿಕೊಂಡು ಈ ಸಂಚಿಕೆ ಹೊರತರಲಾಗಿದೆ. ಕ್ಷೇತ್ರಕಾರ್ಯದ ಪ್ರಾಮುಖ್ಯತೆಯನ್ನು ಮತ್ತು ಅದರಲ್ಲಿನ ಪ್ರಯೋಗಗಳನ್ನು ಸಮಾಜಕಾರ್ಯಕ್ಷೇತ್ರದ ಹಿರಿಯರಾದ ಶಂಕರ ಎಚ್ ಪಾಠಕ (ನಿವೃತ್ತ ಪ್ರಾಧ್ಯಾಪಕರು, ಸಮಾಜಕಾರ್ಯ ವಿಭಾಗ, ದಿಲ್ಲಿ ವಿಶ್ವವಿದ್ಯಾಲಯ), ಹಾಗೂ ಡಾ. ಎಚ್.ಎಂ. ಮರುಳಸಿದ್ಧಯ್ಯ ಅವರ ಸಂದರ್ಶನದಲ್ಲಿ ಹೊರತರಲಾಗಿದೆ. ಈ ವಿಧವಾಗಿ ಸಂಚಿಕೆ ಹೊರತರಬೇಕೆಂದು 3 ತಿಂಗಳ ಹಿಂದೆ ನಮ್ಮ ಪತ್ರಿಕೆಯ ಮೂಲಕ ತಿಳಿಸಲಾಯಿತು ಹಾಗೂ ಹಲವಾರು ಹಿರಿಯ ವೃತ್ತಿಪರರು ಈ ವಿಷಯದ ಕುರಿತಾಗಿ ಬರೆಯಿರಿ ಎಂದು ವಿನಂತಿಸಲಾಯಿತು. ಆದರೆ ಪ್ರತಿಕ್ರಿಯೆಗಳು ಕಡಮೆ ಹಾಗೂ ಬರೆದವರು ಬೆರಳೇಣಿಕೆಯಷ್ಟು. ಇದು ನಮ್ಮ ವೃತ್ತಿಯ ದುರಂತ. ಬರೆಯುವುದಿಲ್ಲ, ಒಂದು ಕಡೆ ಸೇರಿ ಚರ್ಚಿಸುವುದಿಲ್ಲ, ವೃತ್ತಿಯಿಂದ ಅವರವರ ಹೊಟ್ಟೆ ತುಂಬಿದರೆ ಸಾಕು. ಸಮಾಜಕಾರ್ಯ ಕ್ಷೇತ್ರ ಒಂದು ವೃತ್ತಿಯಾಗಿ ಬೆಳೆಯಬೇಕಾದ ಮಟ್ಟ ಇಂದು ಬೆಳೆದಿಲ್ಲ ಎಂದರೆ ತಪ್ಪಾಗಲಾರದು. ಕಾರ್ಯಕ್ಷೇತ್ರದಲ್ಲಿ ಸಂವಹನ ಎಂಬುದು ನಮ್ಮ ಉತ್ತಮ ಮಿತ್ರನು ಅಥವಾ ವೈರಿಯು ಆಗಬಹುದು ಉತ್ತಮ ರೀತಿಯಿಂದ ನಿರ್ವಹಿಸಿದರೆ ಕಾರ್ಯಕ್ಷೇತ್ರದಲ್ಲಿ ಸಂಸ್ಕೃತಿಯನ್ನು ಬಿಂಬಿಸಬಹುದು. ಆದ್ದರಿಂದ ಉತ್ತಮ ಹಾಗೂ ಬಲವಾದ ಸಂಸ್ಥೆಗಳು ಕೆಲಸದ ಸ್ಥಳದಲ್ಲಿ ಅಡೆತಡೆಗಳನ್ನು ನಿವಾರಿಸಿ ಸಮಸ್ಯೆಗಳನ್ನು ಬಗೆಹರಿಸುತ್ತದೆ, ಕಾರ್ಯಕ್ಷೇತ್ರದ ಉತ್ತಮ ಸಂಬಂಧಗಳು ಒಳ್ಳೆಯ ಉತ್ಪಾದಕತೆಯನ್ನು ನೀಡಬಲ್ಲವು.
ಸಾರಾಂಶ
ಲೈಂಗಿಕ ಶೋಷಣೆ ಎಂಬ ಸಂದರ್ಭವು ವಿಭಿನ್ನ ರೀತಿಯ ಆಯಾಮಗಳನ್ನು ಹೊಂದಿದ್ದು ಅದರಲ್ಲಿ ವೇಶ್ಯಾವಾಟಿಕೆಯೂ ಒಂದಾಗಿದೆ. ಕಾಲಘಟ್ಟಗಳಲ್ಲಿ ಈ ವಿಷಯವನ್ನು ಅವಲೋಕಿಸಿದರೆ ಒಂದು ಹಂತದಲ್ಲಿ ತುಂಬಾ ಗೌರವದ ಸ್ಥಾನವನ್ನು ಪಡೆದುಕೊಂಡಿದ್ದೂ ಉಂಟು. ಆದರೆ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಗೆ ಅನುಸರಿಸಿ ಮತ್ತು ದೇಶದಲ್ಲಿ ರಾಜ್ಯದಲ್ಲಿ ಆದಂತಹ ರಾಜಕೀಯ ವ್ಯವಸ್ಥೆಯಿಂದಾಗಿ ಇದು ಸಾಕಷ್ಟು ಸಂದರ್ಭಗಳಲ್ಲಿ ಸ್ಥಿತ್ಯಂತರಕ್ಕೆ ಒಳಪಟ್ಟಿದ್ದೂ ಉಂಟು. ಮೂಲದಲ್ಲಿ ಸಾಂಪ್ರದಾಯಿಕವಾಗಿ ಹುಟ್ಟಿಕೊಂಡ ಒಂದು ವ್ಯವಸ್ಥೆಯು ಪ್ರಸ್ತುತ ಫ್ಲೆಶ್ ಟ್ರೇಡ್ ಎಂಬ ಹೆಸರಿನಿಂದ ಗುರುತಿಸುವ ಮಟ್ಟದವರೆಗೂ ವಾಣಿಜ್ಯೀಕರಣಗೊಂಡಿದೆ. ಇಂಥ ಸಂದರ್ಭದಲ್ಲಿ ಲೈಂಗಿಕ ಶೋಷಣೆಯ ಸಾಂಪ್ರದಾಯಿಕ ಮತ್ತು ವ್ಯವಹಾರಿಕ ಆಯಾಮವನ್ನು ಗುರುತಿಸಲು ಪ್ರಸ್ತುತ ಲೇಖನದಲ್ಲಿ ಪ್ರಯತ್ನಿಸಲಾಗಿದೆ. ಶಿಕ್ಷಣ ವಂಚಿತ ಬಡವರಿಗೆ ಶಿಕ್ಷಣ, ಉಪಯುಕ್ತವಾದ ಕೌಶಲ್ಯಗಳು ಮತ್ತು ಸಬಲೀಕರಣವು ಕ್ಯಾಪ್ ಸಂಸ್ಥೆಯ ಸಂಸ್ಥಾಪನ ಅಧ್ಯಕ್ಷೆಯಾದ ಡಾ. ನಳಿನಿ ಗಂಗಾಧರನ್ರ ಬೃಹತ್ ಬಡತನ ನಿರ್ಮೂಲನೆ ಉಪಕ್ರಮದ ಮೂರು ಮೂಲಭೂತ ಅಂಶಗಳು. ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನಿಂದ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ನಳಿನಿಯವರಿಗೆ ಸುಮಾರು ಮೂರುವರೆ ವರ್ಷಕ್ಕಿಂತ ಹೆಚ್ಚಿನ ಕಾಲ ಸೇವಾ ಸಮಾಜಮ್ ಬಾಯ್ಸ್ ಹೋಮ್ ನ ನಿರ್ದೇಶಕರಾದ ಲೇ|| ಎಂ.ಎಸ್.ಎಸ್. ನಂಬೂದಿರಿಯವರೊಂದಿಗೆ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿತು, ಮೊದಲು ಸಾಮಾಜಿಕ ಕಾರ್ಯಕರ್ತರಾಗಿ ನಂತರ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ನಂಬೂದಿರಿಯವರು ನಿರ್ಗತಿಕ ಮಕ್ಕಳು ಮತ್ತು ಯುವ ಜನರಿಗೆ ನಾವೀನ್ಯ ಶಿಕ್ಷಣದಿಂದ ಮತ್ತು ಕೌಶಲ್ಯಗಳ ಅಭಿವೃದ್ಧಿಯಿಂದ ಅವರು ಬಡತನದಿಂದ ವಿಮುಕ್ತಿ ಪಡೆಯುವಂತೆ ಮಾಡಿದ ಒಬ್ಬ ಮಹಾನ್ ಸಾಧಕ. ನಳಿನಿಯವರು ತಮ್ಮ ಈ ಆರಂಭಿಕ ಅನುಭವಗಳನ್ನು ನಂತರದ ವರ್ಷಗಳಲ್ಲಿ ಭಾರತ ಮತ್ತು ಇತರೆ ದೇಶಗಳಲ್ಲಿ ಬೃಹತ್ ಸಾಮಾಜಿಕ-ಆರ್ಥಿಕ ಚಳುವಳಿಯಾಗಿ ವಿಸ್ತರಿಸಿದರು. ಎಂ.ಎಸ್.ಎಸ್.ಡಬ್ಲ್ಯೂ.ನ ವಿದ್ಯಾರ್ಥಿಯಾಗಿ ನಾನು ನಳಿನಿಯವರಲ್ಲಿ ಜೀವನದ ಸದುದ್ದೇಶವನ್ನು ಹೊಂದಿದ ಆತ್ಮವಿಶ್ವಾಸವುಳ್ಳ ಒಬ್ಬ ವ್ಯಕ್ತಿಯನ್ನು ಕಂಡಿದ್ದೇನೆ. ತಮ್ಮ ಜೀವನದಲ್ಲಿ ನಳಿನಿಯವರು ಅತ್ಯಂತ ಸೂಕ್ತ ಜೀವನ ಸಂಗಾತಿಯನ್ನು ಆರಿಸಿಕೊಂಡಿದ್ದಾರೆ.
ಎಂ.ಎಚ್. ರಮೇಶ ಭಾರತದ ಎರಡನೆಯ ಶಾಂತಿನಿಕೇತನ ಎಂದೇ ಖ್ಯಾತಿ ಪಡೆದ ಒರಿಸ್ಸಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ಸಂಸ್ಥೆಯು (KISS) ಇಂದು 15.000 ಕ್ಕೂ ಅಧಿಕ ಆದಿವಾಸಿ ಮಕ್ಕಳಿಗೆ ಉಚಿತ ಊಟ, ಶಿಕ್ಷಣ ಮತ್ತು ವಸತಿಯನ್ನು ನೀಡುತ್ತಿದೆ. ಇಂದು ಜಗತ್ತಿನ ಅತಿ ದೊಡ್ಡ ವಸತಿ ವಿದ್ಯಾಲಯವಾಗಿದೆ. ಶ್ರೀಯುತ ಅಚ್ಯುತ ಸಮಂತ ಈ ಸಂಸ್ಥೆಯನ್ನು ಪ್ರಾರಂಭಿಸಿದವರು. ವಿದ್ಯಾಭ್ಯಾಸದ ಮೂಲಕ ಸಬಲೀಕರಣ ಮಾಡುವುದು ಇವರ ಪ್ರಮುಖ ಧ್ಯೇಯವಾಗಿದೆ. ಇಲ್ಲಿ ಎಲ್.ಕೆ.ಜಿ ಯಿಂದ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾಭ್ಯಾಸ ನೀಡಲಾಗುತ್ತದೆ. ಇಲ್ಲಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ತರಬೇತಿ ನೀಡಲಾಗುತ್ತದೆ.
ಇದ್ದಕಿದ್ದ ಹಾಗೆ ಮಾರ್ಚ್ 2012 ರ 4ರಂದು ಭಾನುವಾರ ಡಾ.ಆರ್.ಶಿವಣ್ಣನವರು ನನಗೆ ದೂರವಾಣಿ ಕರೆಮಾಡಿ, ನಿಮ್ಮ ಮನೆಕಡೆ ಬರುತ್ತಿದ್ದೇನೆ; ಇನ್ನು ಹತ್ತು- ಹದಿನೈದು ನಿಮಿಷಗಳಲ್ಲಿ ನಿಮ್ಮಲ್ಲಿರುತ್ತೇನೆ; ಪ್ರೊ.ಎಲ್.ಎಸ್.ಶೇಷಗಿರಿರಾವ್ ಕಡೆಹೋಗಿ, ಅವರನ್ನು ನೋಡಿಕೊಂಡು ಬರೋಣ; ಅವರ ಆರೋಗ್ಯ ಅಷ್ಟೇನೂ ಚೆನ್ನಾಗಿಲ್ಲವಂತೆ ಹೀಗೆ ಹೇಳಿದರು. ನಮ್ಮ ಮನೆಗೆ ತೀರಾ ಹತ್ತಿರದಲ್ಲಿದ್ದರೂ ನನ್ನ ಅದೃಢ ಕಾಲು-ಸೊಂಟಗಳ ಕಾರಣದಿಂದ ನಾನು ಅವರನ್ನು ಕಂಡುಬರಲು ಆಗುತ್ತಲಿಲ್ಲ. ಬೇರೆಯವರ ವಾಹನ-ಹೆಗಲ ನೆರವಿನಿಂದ ಮಾತ್ರ ನಾನು ಹೋಗಿಬರಲು ಸಾಧ್ಯ. ಆದುದರಿಂದ ಬಹಳ ದಿನಗಳಾದ ನಂತರ ಈ ಅವಕಾಶ ದೊರೆಯಿತೆಂದು ನನಗೆ ಸಹಜವಾಗಿಯೇ ಸಂತಸವಾಯ್ತು. ಡಾ.ಶಿವಣ್ಣನವರಿಗೆ ಕಾಯತೊಡಗಿದೆ.
|
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|