ಬಡತನವನ್ನು ಉಪಶಮನಗೊಳಿಸಿ ಪ್ರಗತಿ ಸಾಧಿಸಲು ನಮ್ಮ ಸರ್ಕಾರವು ಉದ್ಯೋಗಖಾತರಿ ಯೋಜನೆ, ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯಗಳ ವಿತರಣಾ ಯೋಜನೆ, ರೈತರ ಸಾಲವನ್ನು ಮನ್ನಾ ಮಾಡುವ ಯೋಜನೆಗಳು ನಿರ್ಗತಿಕ (ಬಡ) ಜನರ ಕಣ್ಣಲ್ಲಿ ನೆಮ್ಮದಿಯನ್ನು ಸೂಚಿಸುತ್ತಿವೆ. ಆದರೆ, ಗ್ರಾಮೀಣ ಪ್ರದೇಶದ ಜನರಿಗೆ ಈ ಯೋಜನೆಗಳು ತಲುಪದೇ ಇರುವುದು ಅಸಮಾಧಾನಕರ ಸಂಗತಿಯೇ ಸರಿ! ಮಾವೋವಾದಿಗಳ ಚಟುವಟಿಕೆಗಳು ಉಲ್ಬಣಗೊಳ್ಳುತ್ತಿವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಅಸಮಾನತೆ.
0 Comments
ಜೀವನದಲ್ಲಿ ಎಷ್ಟೇ ಕಷ್ಟಗಳು, ಸಮಸ್ಯೆಗಳು ಬಂದರೂ, ದುಃಖದೊಳು ಮುಳುಗಿದರೂ, ತನ್ನ ಅಸ್ಥಿತ್ವವನ್ನು ಸ್ಥಾಪಿಸಿಕೊಂಡು ಜೊತೆಗೆ ತನ್ನಂತಹ ಅನೇಕ ವಿಕಲಚೇತನರ ಅಸ್ಥಿತ್ವಕ್ಕಾಗಿ, ಹಕ್ಕುಗಳಿಗಾಗಿ ಮತ್ತು ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ಹೋರಾಟಗಾರರು, ಛಲಗಾರರು ತೀರಾ ವಿರಳ. ಹೀಗಿರುವಾಗ ತನ್ನೊಳಗಿನ ದೈಹಿಕ ಅಶಕ್ತತೆಯನ್ನು ಸಂಪೂರ್ಣ ದೂರವಿಟ್ಟು, ಆತ್ಮ ಶಕ್ತಿಯನ್ನು ಮನದೊಳಗಿನ ಧೀಃಶಕ್ತಿಯನ್ನು ಕೇಂದ್ರೀಕರಿಸಿಕೊಂಡು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವೆನಿಸಿಕೊಂಡಿದ್ದಲ್ಲದೆ ಅರ್ಜುನ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಹೀಗೆ ಇನ್ನೂ ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡು ಸಮಾಜಸೇವೆಯ ಕಡೆ ಮುಖಮಾಡಿರುವ ಈ ಅದಮ್ಯ ಚೇತನವೇ ಮಾಲತಿ ಹೊಳ್ಳ.
ವಿಕಲಾಂಗರ ಬಗ್ಗೆ ಹಲವು ಬಾರಿ ನಾವು ಚರ್ಚಿಸಿದ್ದೇವೆ, ಹಲವು ಕಾನೂನು, ಸೌಲಭ್ಯಗಳನ್ನು ಸಮಾಜದಲ್ಲಿ ಕಲ್ಪಿಸಿದ್ದೇವೆ ಆದರೆ ಅವರ ಲೈಂಗಿಕ ಹಕ್ಕುಗಳ ಬಗ್ಗೆ ನಾವು ಎಂದಾದರೂ ಚಿಂತಿಸಿದ್ದೀವಾ? ವೃತ್ತಿಯಲ್ಲಿ ಸಮಾಜಕಾರ್ಯಕರ್ತರಾದ ನಾವು ಈ ರೀತಿಯದಾದ ಸಮಸ್ಯೆಗಳನ್ನು ನಮ್ಮೆದುರು ಬಂದರೆ ವೃತ್ತಿಪರವಾಗಿ ನಾವು ಯಾವ ರೀತಿ ಈ ಸಮಸ್ಯೆಗಳಿಗೆ ಪರಿಹಾರ ನೀಡಬಹುದು ನಮಗೆ ತಿಳಿದಿಲ್ಲ.
ಒಮ್ಮೆ ಹಾಂಗ್ ಸುಂಗ್ ಕಿ ನಿರ್ಮಿಸಿದ ವಿಕಲಾಂಗರ ಲೈಂಗಿಕ ಹಕ್ಕುಗಳ ಕುರಿತ ಚಲನಚಿತ್ರ `ಸೆಕ್ಸ್ ವಾಲೆಂಟಿಯರ್' ಸಮಾಜಕಾರ್ಯ ವೃತ್ತಿಪರರು ನೋಡಿದರೆ ಉಪಯುಕ್ತವಾಗಬಹುದು. ಒಮ್ಮೆ ವೀಕ್ಷಿಸಿ ನಿಮ್ಮಲ್ಲೇನಾದರೂ ಬದಲಾವಣೆಯಾಗುವುದೇ ಪರೀಕ್ಷಿಸಿ. ತಿರುಳು
ಡಾ. ಎಂ. ಬಸವಣ್ಣರವರು ನಿವೃತ್ತ ಮನೋವಿಜ್ಞಾನ ಪ್ರಾಧ್ಯಾಪಕರು ಹಾಗೂ ಕನ್ನಡದಲ್ಲಿ ಪ್ರಸಿದ್ಧ ಬರಹಗಾರರು. ಯುಗಾಂತ ಲೇಖನವು ಮಹಾಭಾರತದಲ್ಲಿನ ಸಾಮಾಜಿಕ ಬದುಕನ್ನು ವಿಶ್ಲೇಷಣೆ ಮಾಡುವ ಒಂದು ಪ್ರಯತ್ನವಾಗಿದೆ. ಪಾತ್ರದಲ್ಲಿರುವ ದೈವತ್ವವನ್ನು ಉತ್ಪ್ರೇಕ್ಷಿಸಿಲ್ಲ. ಪಾತ್ರಗಳನ್ನು ಅವರ ಇಷ್ಟ ಹಾಗೂ ಕಷ್ಟ, ಪ್ರೀತಿ, ದ್ವೇಷ ಮತ್ತು ಮಹತ್ವಾಕಾಂಕ್ಷೆಗಳಿಂದ ಸಾಮಾನ್ಯ ಮಾನವರ ರೀತಿ ಚಿತ್ರಿಸಲಾಗಿದೆ. ಬಾಳೆ ಎಲೆ ಶಿವಕುಮಾರ್ ಅವರ ಬಗ್ಗೆ ಬೆಂಗಳೂರಿನ ಪ್ರತಿಯೊಬ್ಬರಿಗೂ ಬಹುಶಃ ತಿಳಿದಿರಬಹುದು. ಬೆಂಗಳೂರಿನ ಯಾವುದೋ ಒಂದು ಕಲ್ಯಾಣ ಮಂಟಪದಲ್ಲಿ ಅಥವಾ ಇನ್ನಾವುದೋ ಶುಭ ಸಮಾರಂಭದಲ್ಲಿ ಉಳಿದ ಆಹಾರವನ್ನು ಹಸಿದ ಹತ್ತಿರದ ಕೊಳೆಗೇರಿಯ ಜನಗಳಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಉಂಡು ಮಿಕ್ಕಿದ ಆಹಾರವನ್ನು ಹಸಿದ ಹೊಟ್ಟೆಗಳಿಗೆ ತಲುಪಿಸುವ ಮಹತ್ತರವಾದ ಕಾರ್ಯವನ್ನು ಮಾಡುತ್ತಿದ್ದಾರೆ ಶ್ರೀಯುತ ಶಿವಕುಮಾರ್ ಅವರು.
1. ಹುಚ್ಚು ಕನಸು ಹೊತ್ತು ಬಂದ ದಂಪತಿ
ನಮ್ಮ ಹುಡುಗ ಅಮೆರಿಕಾಕ್ಕೆ ಓದಲು ಹೊರಟಿದ್ದಾನೆ; ನಮ್ಮ ಅಳಿಯನಿಗೆ ಅಮೆರಿಕೆಯಲ್ಲಿ ಕೆಲಸ ಸಿಕ್ಕಿದೆ, ನಮ್ಮ ಮಗಳನ್ನು ಕರೆದುಕೊಂಡು ಮುಂದಿನವಾರವೇ ಹೋಗುತ್ತಿದ್ದಾನೆ; ಇತ್ಯಾದಿಯಾಗಿ ಸಂತಸದಿಂದ ಸುದ್ದಿ ಹಂಚಿಕೊಳ್ಳುವುದು ಈಗ ಸಾಮಾನ್ಯವಾಗಿ ಕೇಳಿಬರುವ ಸಂಗತಿ. ನಮ್ಮಹುಡುಗ ಅಮೆರಿಕಾದಿಂದ ಭಾರತದಲ್ಲೇ ಇರಲು ಬರುತಿದ್ದಾನೆ ಎಂದರೆ, ಪ್ರಸ್ತುತ ಇರುವ ಜಾಗತಿಕ ಆರ್ಥಿಕ ಮುಗ್ಗಟ್ಟಿನ ಪರಿಣಾಮವಾಗಿ ಕೆಲಸ ಕಳೆದುಕೊಂಡಿರಬೇಕು, ಪಾಪ ಎಂದು ಅನುಕಂಪದ ಮಾತನಾಡುವವರು ಅನೇಕರು. ಆದರೆ ಇದ್ದ ಉತ್ತಮ ಗಳಿಕೆಯ ಕೆಲಸವನ್ನು ಬಿಟ್ಟು ಭಾರತರದಲ್ಲಿಯ ಕಡು ಬಡವರ, ಸಾಮಾಜಿಕವಾಗಿ, ಆರ್ಥಿಕವಾಗಿ ಶೋಷಣೆಗೆ ಒಳಗಾಗಿರುವವರ ಬಗೆಗೆ ಕಾಳಜಿ ವಹಿಸಿ, ಅವರನ್ನು ಸಶಕ್ತರನ್ನಾಗಿ ಮಾಡಿ ಸಾಮಾಜಿಕವಾಗಿ-ಆರ್ಥಿಕವಾಗಿ ಅಸಮತೋಲನವನ್ನು ಕಡಿಮೆ ಮಾಡುವ ಕನಸು ಕಟ್ಟಿಕೊಂಡು ಭಾರತಕ್ಕೆ ಬಂದಿದ್ದೇವೆ ಎಂದು ಯಾರಾದರೂ ಹೇಳಿದರೆ, ಅವರಿಗೆ ಹುಚ್ಚು ಹಿಡಿದಿದೆ ಎಂದು ಸಹಜವಾಗಿ ಅನ್ನುವವರು ಸಾಕಷ್ಟು ಜನ ಸಿಕ್ಕುತ್ತಾರೆ. ಇಂತಹ ಹುಚ್ಚುಕನಸುಗಳನ್ನು ಹೊತ್ತುಕೊಂಡು ಅಮೆರಿಕೆಯಿಂದ 1979 ರಲ್ಲಿ ಭಾರತಕ್ಕೆ ಬಂದವರು ಶ್ರೀಮತಿ(ಸುಶ್ರೀ) ಶ್ಯಾಮಲಾ ಹಿರೇಮಠ್ ಹಾಗೂ ಶ್ರೀ ಎಸ್, ಆರ್, ಹಿರೇಮಠ್ ದಂಪತಿ. ಮನುಷ್ಯರ ವರ್ತನೆ ವಿಚಿತ್ರ, ವೈವಿಧ್ಯಮಯ. ಹಾಗಾಗಲು ಕಾರಣಗಳು ಹಲವಾರು. ಸಮಾಜವಿಜ್ಞಾನಿಗಳು, ಮನೋವಿಜ್ಞಾನಿಗಳು, ಈ ವೈವಿಧ್ಯಮಯ ವರ್ತನೆಗಳಿಗೆ ಕಾರಣಗಳನ್ನು ಕಂಡುಹಿಡಿಯಲು ಎಂದಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಕೆಲವರು ದೈಹಿಕ ಕಾರಣಗಳನ್ನು ಎತ್ತಿ ತೋರಿಸಿದರೆ, ಬೇರೆಯವರು ಸಾಮಾಜಿಕ ಕಾರಣಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತಾರೆ. ಇನ್ನು ಕೆಲವರು ವೈಯಕ್ತಿಕ (ಮಾನಸಿಕ) ಕಾರಣಗಳನ್ನು ಉದಹರಿಸುತ್ತಾರೆ. ವಾಸ್ತವವಾಗಿ ನೋಡಿದರೆ ವರ್ತನೆಯನ್ನು ನಿರ್ಧರಿಸುವಲ್ಲಿ ಇವೆಲ್ಲದರ ಪಾತ್ರವೂ ಇದೆ. ಸಾಮಾಜಿಕ ಪರಿಸರ, ಸಂದರ್ಭ, ಸನ್ನಿವೇಶ, ಸುತ್ತಣ ಜನರ ಒತ್ತಾಯ, ವರ್ತನೆಯಲ್ಲಿ ಹೇಗೆ ಮಾರ್ಪಾಡು ತರುತ್ತದೆ ಎನ್ನುವುದು ಈ ಲೇಖನದ ವಿಷಯ. ಇಲ್ಲಿ ಮನುಷ್ಯರು ಕೆಟ್ಟದಾಗಿ ವರ್ತಿಸಲು ಸಾಮಾಜಿಕ ಪರಿಸರ ಎಷ್ಟರಮಟ್ಟಿಗೆ ಕಾರಣ ಎಂಬುದನ್ನು ಹೇಳಲು ಪ್ರಯತ್ನಿಸಿದೆ. ಮೂಲತಃ ಎಲ್ಲರೂ ಒಳ್ಳೆಯವರೆ, ಆದರೆ ಸಂದರ್ಭ, ಸನ್ನಿವೇಶಗಳು ಜನರನ್ನು ಕೆಟ್ಟವರನ್ನಾಗಿ ಮಾಡುತ್ತದೆ ಎನ್ನುವುದು ಹಳೆಯ ಮಾತು. ಅದನ್ನು ಪ್ರಯೋಗದ ಮೂಲಕ ತೋರಿಸಲು ಜಿ಼ಂಬಾರ್ಡೊ ಎಂಬ ಸಮಾಜಮನೋವಿಜ್ಞಾನಿ ಯತ್ನಿಸಿದ್ದಾರೆ. ಅದರ ವಿವರಣೆ ಇಲ್ಲಿದೆ. ಅವರು ನಡೆಸಿದ ಪ್ರಯೋಗಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು, ಚಿತ್ರಗಳನ್ನು, ವಿಡಿಯೊಗಳನ್ನು ನೀವು ಇಂಟರ್ನೆಟ್ನಲ್ಲಿ ನೋಡಬಹುದು. ಮನುಷ್ಯ ಹಾಳಾಗಲು ಪರಿಸರದ ಒತ್ತಡ ಒಂದೇ ಕಾರಣವಲ್ಲ. ಬೇರೆಯವು ಇರುತ್ತವೆ. ಏನೇ ಒತ್ತಡವಿದ್ದರೂ ಕೆಲವರು ಬದಲಾಗುವುದಿಲ್ಲ ಎಂಬುದನ್ನು ನಾವು ಮರೆಯಬಾರದು. ಹಾಗೆಂದ ಮಾತ್ರಕ್ಕೆ ಪರಿಸರದ ಪ್ರಭಾವವನ್ನು ಕಡೆಗಣಿಸುವಂತಿಲ್ಲ. ಈ ವಿಷಯವನ್ನು ಮನದಟ್ಟು ಮಾಡುವಲ್ಲಿ ಜಿ಼ಂಬಾರ್ಡೊ ಮಾಡಿದ ಪ್ರಯೋಗ ಮನೋವಿಜ್ಞಾನದಲ್ಲಿ ಒಂದು ಮೈಲಿಗಲ್ಲಾಗಿದೆ; ಅಷ್ಟೆ ವಿವಾದಾತ್ಮಕವಾಗಿದೆ ಕೂಡ.
14 ವರ್ಷದ ಆ ಬಾಲೆ ತನ್ನ ಟ್ಯೂಷನ್ ಮುಗಿಸಿ ಸಂಜೆಯ ಮಬ್ಬುಗತ್ತಲಿನಲ್ಲಿ ಮನೆಗೆ ಮರಳುತ್ತಿರುವಾಗ, ಹೆಂಗಸೊಬ್ಬಳು ಹತ್ತಿರ ಬಂದು ಯಾವುದೋ ಚೀಟಿ ತೋರಿಸಿ, ವಿಳಾಸ ಕೇಳುವಂತೆ ನಟಿಸಿದ್ದೊಂದೇ ಗೊತ್ತು. ಮತ್ತೆ ಮೈಮೇಲೆ ಎಚ್ಚರವೇ ಇಲ್ಲ. ಅರೆ ಮಂಪರಿನ ಎಚ್ಚರಾದಾಗ ರೈಲಿನಲ್ಲಿ ಎಲ್ಲಿಗೋ ಪ್ರಯಾಣಿಸುತ್ತಿರುವುದು, ಮಧ್ಯರಾತ್ರಿ ಮೀರಿ ಹೋಗಿರುವುದು ತಾನು ಸೀಟಿನ ಕೆಳಗಡೆ ಮಲಗಿಸಲ್ಪಟ್ಟಿರುವುದು ಅವಳ ಗಮನಕ್ಕೆ ಬಂದಿದೆ. ನಿಧಾನಕ್ಕೆ ಎಚ್ಚೆತ್ತು ಸಹಪ್ರಯಾಣಿಕರ ಗಮನ ಸೆಳೆದು ಅವರು ಈ ಹುಡುಗಿಯನ್ನು ವಿಚಾರಿಸುತ್ತಿರುವಾಗಲೇ ಇವಳನ್ನು ಕದ್ದು ತಂದಿದ್ದ ಹೆಂಗಸು ರೈಲು ನಿಂತ ಮುಂದಿನ ಸ್ಟೇಷನ್ನಲ್ಲಿ ಇಳಿದು ಹೋಗಿದ್ದಾಳೆ. ಅಂತೂ ಹೇಗೋ ಈ ಹುಡುಗಿ ಮನೆ ಸೇರಿದಳಾದರೂ ಪೊಲೀಸ್ಗೆ ದೂರು ನೀಡಿದ್ದರೆ ಆ ಹೆಂಗಸು ಸಿಕ್ಕಿ ಹಾಕಿಕೊಳ್ಳಬಹುದಾದ, ಅವಳ ಹಿಂದೆ ಇರಬಹುದಾದ ಜಾಲವನ್ನು ಪತ್ತೆ ಹಚ್ಚುವ ಎಲ್ಲ ಸಾಧ್ಯತೆಗಳಿದ್ದೂ ಬಾಲ ನ್ಯಾಯಮಂಡಳಿಗೆ ದೂರು ನಡಿ, ಅವರು ಅದನ್ನು ಗಂಭೀರವಾಗಿ ಪರಿಗಣಿಸದೇ ಕೆಲದಿನಗಳಲ್ಲೇ ಕೇಸನ್ನು ಮುಚ್ಚಿಹಾಕಿದರು. ಹಾಗಿದ್ದರೆ ನ್ಯಾಯ ಎಲ್ಲಿದೆ?
ತೀರಾ ಇತ್ತೀಚೆಗೆ ಬೆಂಗಳೂರನ್ನೂ ಒಳಗೊಂಡಂತೆ ರಾಜ್ಯದ ಇತರ ಭಾಗಗಳಲ್ಲಿ ನಡೆದ ಸರಣಿ ಅತ್ಯಾಚಾರಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿವೆ. ಹಸುಗೂಸುಗಳ ಮೇಲೆ ನಡೆದಂತಹ ಅತ್ಯಾಚಾರಗಳಂತೂ ಸಮಾಜದ ವಿವಿಧ ಸ್ತರಗಳ ಜನರನ್ನು ವ್ಯವಸ್ಥೆಯ ವಿರುದ್ಧ ತಿರುಗಿ ಬೀಳುವಂತೆ ಮಾಡಿವೆ. ಶಾಂತಿ ಸಹಬಾಳ್ವೆಗೆ ಹೆಸರಾದ ಕನ್ನಡ ನಾಡಿನಲ್ಲಿ ನಡೆದ ಅತ್ಯಾಚಾರ ಸರಣಿಗಳು ನಾಗರಿಕನ (ಮನುಷ್ಯನ) ಅನಾಗರಿಕ ವರ್ತನೆಗೆ ಹಿಡಿದಗನ್ನಡಿ. ಈ ರೀತಿ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಹಿಂದೆಯೂ ಸಹ ಈ ರೀತಿಯ ಘಟನೆಗಳು ನಡೆದ ನಿದರ್ಶನಗಳಿವೆ. ಪ್ರಮುಖವಾಗಿ ಮಕ್ಕಳ ಮೇಲೆ ನಡೆದಂತಹ ಅತ್ಯಾಚಾರಗಳನ್ನು ಖಂಡಿಸಿ ಮಾನವ ಹಕ್ಕು, ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರರು ಹಾಗು ಸಂಘಟಣೆಗಳು ರಸ್ತೆಗಿಳಿದು ಪ್ರತಿಭಟಿಸಿದ ಉದಾಹರಣೆಗಳು ನಮ್ಮಲ್ಲಿ ಹೇರಳವಾಗಿ ದೊರಕುತ್ತವೆ. ಆದರೆ ಇದೇ ಮೊದಲು ಬೆಂಗಳೂರಿನ ಹೆಸರಾಂತ ಅಂತರಾಷ್ಟ್ರೀಯ ಶಾಲೆಯ ಆರು ವಯಸ್ಸಿನ ಬಾಲೆಯ ಮೇಲೆ ಅಲ್ಲಿನ ಸಿಬ್ಬಂದಿ (ಶಿಕ್ಷಕ / ಮಾರ್ಗದರ್ಶಕ) ನಡೆಸಿದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಪೋಷಕರು, ಸಮಾಜದ ವಿವಿಧ ಸ್ತರದ ಜನರು ಹೋರಾಟಗಾರರು, ವಿದ್ಯಾರ್ಥಿಗಳನ್ನೊಳಗೊಂಡಂತೆ ಎಲ್ಲ ರೀತಿಯ ಸಂಘಟಣೆಗಳು ಮತ್ತು ಸಂಘಸಂಸ್ಥೆಗಳು ಬೀದಿಗಿಳಿದು ಪ್ರತಿಭಟಿಸಿವೆ. ಇದು ಉತ್ತಮ ನಡೆಯಾದರೂ, ಕೆಲವೇ ದಿನಗಳಲ್ಲಿ ಪೋಷಕರ ಈ ಆಕ್ರೋಶ ತಣ್ಣಗಾಗಿ ಮತ್ತದೇ ಶಾಲೆಗೆ ತಮ್ಮ ಮಕ್ಕಳನ್ನು ಎಂದಿನಂತೆ ಕಳುಹಿಸುತ್ತಿದ್ದಾರೆ. ಸರ್ಕಾರವೂ ಸಹ ಜನರ ಕಣ್ಣೊರೆಸುವ ಪ್ರಯತ್ನ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. ಇದರ ಜೊತೆಗೆ ಎಲ್ಲ ಸರ್ಕಾರೇತರ ಶಾಲೆಗಳಿಗೆ (ಖಾಸಗಿ) ಕೆಲ ಮಾರ್ಗಸೂಚಿಗಳನ್ನು ನೀಡಿದ ಸರ್ಕಾರ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕೆಂದು ತಾಕೀತು ಮಾಡಿದೆ. ಇದರ ನಡುವೆ ಬೆಂಗಳೂರಿನ ಶಾಂತಿ ಸುವ್ಯವಸ್ಥೆಯ ಹೊಣೆ ಹೊತ್ತ ಅಧಿಕಾರಿಯನ್ನು ಪದಚ್ಯುತಗೊಳಿಸಿ ಅದೇ ಸ್ಥಾನದಲ್ಲಿ ಬೇರೊಬ್ಬ ಅಧಿಕಾರಿಯನ್ನು ಸರ್ಕಾರ ನೇಮಿಸಿದೆ. ಇಷ್ಟಕ್ಕೆ ಸಮಸ್ಯೆ ತಣ್ಣಗಾಗಿದೆ. ಮಕ್ಕಳು ಎಂದಿನಂತೆ ಶಾಲೆಗೆ ತೆರಳುತ್ತಿದ್ದಾರೆ. ಪೋಷಕರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ಮಗ್ನರಾಗಿದ್ದಾರೆ. ಆದರೆ ಈ ಬಗ್ಗೆ ಅಂತರ್ಜಾಲದ ಸಾಮಾಜಿಕ ತಾಣಗಳಲ್ಲಿ ಬಿಸಿಬಿಸಿ ಚರ್ಚೆಗಳು ಇನ್ನೂ ನಡೆಯುತ್ತಿವೆ. ಕೇವಲ ಕೆಲವೇ ಬೆರಳೆಣಿಕೆಯ ದಿನಪತ್ರಿಕೆಗಳು ಈ ವಿಷಯವಾಗಿ ಅನುಪಾಲನೆ ನಡೆಸಿ ವರದಿಗಳನ್ನು ಬಿತ್ತರಿಸುತ್ತಿವೆ.
ನನ್ನ ಸ್ನೇಹಿತ ದಿನೇಶ ನಾಲ್ಕು ವರ್ಷಗಳಿಂದ ಉದ್ಯೋಗನಿಮಿತ್ತವಾಗಿ ಪಂಜಾಬ್ನ ರೂಪಾರ್ (ರೂಪನಗರ್) ಎಂಬಲ್ಲಿ ನೆಲೆಸಿದ್ದಾನೆ. ಅಂದಿನಿಂದಲೇ ಅವನು, ನೀವೊಮ್ಮೆ ಇಲ್ಲಿಗೆ ಬನ್ನಿ. ಕಾಶ್ಮೀರ,ಪಂಜಾಬ್ ಎಲ್ಲಾ ನೋಡಿಕೊಂಡು ಹೋಗಬಹುದು ಎಂದು ಆಹ್ವಾನಿಸುತ್ತಲೇ ಇದ್ದ. ದೂರದ ಪ್ರಯಾಣ, ದುಬಾರಿ ಖರ್ಚುಗಳ ಕಾರಣದಿಂದಾಗಿ ನಾನು ಮುಂದೂಡುತ್ತಲೇ ಇದ್ದೆ. 2011ರಲ್ಲಿ ಒಂದೇ ವಾರದಅಂತರದಲ್ಲಿ ನಾವಿಬ್ಬರೂ ಒಂದೇ ತೆರನಾದ ಕಾರುಗಳನ್ನು ಖರೀದಿಸಿದ್ದೆವು. ಅದಾಗಿ ಆರೇಳು ತಿಂಗಳ ನಂತರ, ದಿನೇಶ ಒಂದು ದಿನ ಪೋನ್ ಮಾಡಿ, ಈಗಲಾದರೂ ಬಂದರೆ, ನನ್ನ ಕಾರಿನಲ್ಲೇ ಕಾಶ್ಮೀರಎಲ್ಲಾ ಸುತ್ತಬಹುದು. ಮುಂದೆ ನನಗೆ ಟ್ರಾನ್ಸ್ಫರ್ ಆದರೆ, ಇಲ್ಲೆಲ್ಲಾ ಸ್ವಂತ ಕಾರಿನಲ್ಲಿ ಸುತ್ತಲು ಆಗುವುದಿಲ್ಲ ಎಂದಿದ್ದ. ಕಾಶ್ಮೀರದ ಕಣಿವೆಗಳಲ್ಲಿ ಕಾರು ಡ್ರೈವ್ ಮಾಡುವ ಮೋಹದಿಂದ ನಾನುತಪ್ಪಿಸಿಕೊಳ್ಳಲಾಗಲಿಲ್ಲ. ಮುಂದಿನ ಎರಡೇ ತಿಂಗಳಲ್ಲಿ ಕಾಶ್ಮೀರ ಪ್ರವಾಸ ನಿರ್ಧಾರವಾಗಿಬಿಟ್ಟಿತ್ತು.
ಪ್ರೀತಿ ಎಂದರೇನು, ಅದು ಎಲ್ಲಿ ಹುಟ್ಟುತ್ತದೆ, ಹೇಗೆ ಹುಟ್ಟುತ್ತದೆ, ಹೇಗೆ ಬೆಳೆಯುತ್ತದೆ ಎನ್ನುವ ಪ್ರಶ್ನೆಗಳಿಗೆ ವೈಜ್ಞಾನಿಕವಾಗಿ ಉತ್ತರಿಸುವುದು ಸುಲಭವಲ್ಲ. ಅದು ಕಲಾವಿದರ, ಕವಿಗಳ, ಕಾದಂಬರಿಕಾರರ ಕೆಲಸ. ಆದರೂ ಪ್ರೀತಿ ಒಂದು ಮಾನಸಿಕ ಸಂಸ್ಥಿತಿಯಾದ್ದರಿಂದ ಹಾಗು ವ್ಯಕ್ತಿಗಳ ನಡುವೆ ಏರ್ಪಡುವ ಅಪೂರ್ವ ಸಂಬಂಧವಾದರಿಂದ, ಮನೋವಿಜ್ಞಾನಿಗಳಿಗೆ ಅದರ ವಿಚಾರವಾಗಿ ಕುತೂಹಲವಿರುವುದು ಸಹಜ. ಸುಮಾರು 1950ರವರೆಗೆ ಪ್ರೀತಿಯಂಥ ವ್ಯಕ್ತಿನಿಷ್ಠ ಅನುಭವವನ್ನು ಪ್ರಯೋಗಾಲಯದಲ್ಲಿ ಅಧ್ಯಯನ ಮಾಡುವ ಸಾಧ್ಯತೆಯನ್ನು ಯಾವ ಮನೋವಿಜ್ಞಾನಿಯೂ ಯೋಚಿಸಿರಲಿಲ್ಲ. ಅಂಥ ಒಂದು ಹುಚ್ಚು ಸಾಹಸಕ್ಕೆ ಕೈ ಹಾಕಿದವರು ವಿಸ್ಕಾನ್ಸಿನ್ ವಿಶ್ವವಿದ್ಯಾಲಯದಲ್ಲಿ ಮನೋವಿಜ್ಞಾನದ ಪ್ರಾಧ್ಯಾಪಕರಾಗಿದ್ದ ಹ್ಯಾರಿ ಹಾರ್ಲೊ (Harry Frederick Harlow, 1905-1981) ಎಂಬುವವರು. ಪ್ರೀತಿಯಂಥ ವ್ಯಕ್ತಿನಿಷ್ಠ (subjective) ಅನುಭವವನ್ನು ವಸ್ತುನಿಷ್ಠವಾಗಿ (objective) ಲೆಬಾರಟರಿಯಲ್ಲಿ ಅಧ್ಯಯನ ಮಾಡಿದ ಹಾರ್ಲೊ ಅವರ ಪ್ರಯತ್ನ ಮೆಚ್ಚತಕ್ಕದ್ದೆ. ಹಾರ್ಲೊ ನಡೆಸಿದ ಪ್ರಯೋಗಗಳು ಮನೋವಿಜ್ಞಾನದ ಇತಿಹಾಸದಲ್ಲಿ ಪ್ರಸಿದ್ಧವಾಗಿರುವುದಷ್ಟೇ ಅಲ್ಲ; ಬಹಳಷ್ಟು ವಿವಾದಗಳನ್ನೂ ಹುಟ್ಟುಹಾಕಿವೆ; ಅದು ಬೇರೆ ವಿಚಾರ.
ಲಕ್ಷಾಂತರ ಮಂದಿಯ ಜೀವನವನ್ನು ಬದಲಾಯಿಸಿದ ಮಹಿಳಾ ಸಾಮಾಜಿಕ ಕಾರ್ಯಕರ್ತರು ಶಾಂತಿ ರಂಗನಾಥನ್ ಶಾಂತಿ ರಂಗನಾಥನ್ರವರು ಸಾಮಾಜಿಕ ಕಾರ್ಯಕರ್ತರು ಮತ್ತು ವಿರಳ ವ್ಯಕ್ತಿ. ಅವರು ತಮ್ಮ ಇಳಿವಯಸ್ಸಿನಲ್ಲೇ ತಮ್ಮ ಗಂಡನನ್ನು ಕಳೆದುಕೊಂಡು ತಮ್ಮ ಖಾಸಗಿ ಜೀವನದಲ್ಲಿ ಬಹಳ ನೋವನ್ನುಂಡವರು. ಅವರು ವಿಶ್ವದರ್ಜೆಯ ಸಂಸ್ಥೆಯನ್ನು ಸ್ಥಾಪಿಸಲು ಇದೂ ಒಂದು ಮುಖ್ಯ ಕಾರಣವಾಯಿತು. ಈ ಸಂಸ್ಥೆಯ ಮೂಲಕ ಸಾವಿರಾರು ವ್ಯಕ್ತಿಗಳಿಗೆ ಮತ್ತು ಕುಟುಂಬಕ್ಕೆ ಪರಿವರ್ತನೆಯನ್ನು ತಂದಿದ್ದಾರೆ. ನಾಲ್ಕು ದಶಕಗಳ ಹಿಂದೆ ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ನಲ್ಲಿ ಆಕೆಯು ನನ್ನ ಸಹ ವಿದ್ಯಾರ್ಥಿಯಾಗಿದ್ದು ತರುವಾಯ ಟಿ.ಟಿ ರಂಗನಾಥನ್ ಕ್ಲಿನಿಕಲ್ ರಿಸರರ್ಚ್ ಫೌಂಡೇಷನ್ (ಟಿಟಿಆರ್ಸಿಆರ್ಎಫ್) ನ ಆರಂಭದ ವರ್ಷಗಳಲ್ಲಿನ ನನ್ನ ಅವರ ಒಡನಾಟವು ನನ್ನ ಒಂದು ಅದೃಷ್ಟವೆಂದೇ ಹೇಳಬಹುದು.
ಡಾ.ಟಿ.ಕೆ. ನೈಯ್ಯರ್ ಸಮಾಜಕಾರ್ಯದ ಪ್ರೊಫೆಸರ್ ಮತ್ತು ಮಾಜಿ ಪ್ರಿನ್ಸಿಪಾಲರು ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಮುಂದಿನ ನೂರು ವರ್ಷಗಳಲ್ಲಿ ಮನುಕುಲ ನಾಶವಾಗಲಿದೆಯೆಂದು ಕೆಲವು ಸಮಯದ ಹಿಂದೆ ಆಸ್ಟ್ರೇಲಿಯಾದ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದರು. ಇವರ ಲೆಕ್ಕಾಚಾರದ ಪ್ರಕಾರ ಈ ನಾಶಕ್ಕೆ ಕಾರಣ ಎಗ್ಗಿಲ್ಲದ ಬಳಕೆ, ಅಂದರೆ ಮನುಷ್ಯರ ಅತಿಭೋಗದ ಬದುಕು. ಕೈಗಾರಿಕೀಕರಣದ ಬಳಿಕ ಮಾನವ ಆಂತ್ರೋಪೊಸೀನ್ ಎಂಬ ಅನಧಿಕೃತ ವೈಜ್ಞಾನಿಕ ಕಾಲಘಟ್ಟವನ್ನು ಪ್ರವೇಶಿಸಿದ್ದಾನಂತೆ. ಈ ಕಾಲಘಟ್ಟದಲ್ಲಿ ಮನುಷ್ಯ ಅಗತ್ಯ ಮತ್ತು ಆಸೆ ಗಳಿಗಾಗಿ ನಿಸರ್ಗದ ಸಂಪತ್ತನ್ನು ಕೃತಕ ಸಂಪತ್ತನ್ನಾಗಿ ಪರಿವರ್ತಿಸುತ್ತಾ, ಪರಿಸರವನ್ನು ಮಾಲಿನ್ಯ ಮಾಡುತ್ತಾ, ಅಸಮತೋಲನವನ್ನು ಉಂಟು ಮಾಡುತ್ತಾ ಸಾಗುತ್ತಾನೆ. ಈ ಮಾಲಿನ್ಯ, ಅಸಮತೋಲನದಿಂದ ಮತ್ತೆ ನೈಸರ್ಗಿಕ ಸಂಪನ್ಮೂಲದ ಅಭಾವ, ಆಹಾರದ ಅಭಾವ ಉಂಟಾಗಿ; ಅನೇಕಾನೇಕ ಕಾಯಿಲೆಗಳು ಬಂದು; ಸಾಮಾಜಿಕ ಪ್ರಕ್ಷುಬ್ದತೆಯು ಉಂಟಾಗಿ ಮನುಕುಲದ ನಾಶ ಆಗಬಹುದು ಎಂಬುದನ್ನು ಯಾರಾದರೂ ಊಹಿಸಬಹುದು. ಆದರೆ ಉಂಟಾಗುವ ತೊಂದರೆಗಳು ಮತ್ತು ಅವುಗಳ ಕಾರಣಗಳ ಅರಿವು ಆದಂತೆಲ್ಲಾ ಮತ್ತಷ್ಟು ವೈಜ್ಞಾನಿಕ ಸಂಶೋಧನೆಗಳನ್ನು ಮಾಡಿ, ಪರಿಹಾರ ಹುಡುಕಿಕೊಳ್ಳಬಲ್ಲೆವು ಎಂದು ಜನರು ನಂಬಿಕೊಂಡಿದ್ದಾರೆ. ಇನ್ನು ಕೆಲವು ವಿಜ್ಞಾನಿಗಳು ಮತ್ತು ಇತರ ಜನರು ಪ್ರಕೃತಿಯನ್ನು ಗೆಲ್ಲಬಲ್ಲೆವೆಂಬ ಅಹಂನಿಂದ ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಸಾಗದೆ ಅದರ ವಿರುದ್ಧವಾಗಿ ಸಾಗುವುದು ಇನ್ನಷ್ಟು ದುರಂತಕ್ಕೆ ಕಾರಾಣವಾಗಬಹುದು.
ಗಾಂಧೀಜಿಯ ದೃಷ್ಟಿಯಲ್ಲಿ ಸಮಾಜಕಾರ್ಯ ಎಂದರೆ ಸಮಾಜ ಪರಿವರ್ತನೆಯ ಕಾರ್ಯ. ಸಮಾಜದ ಪರಿವರ್ತನೆಯ ಕಾರ್ಯ ಎಂದರೆ ಹೊಸ ಮೌಲ್ಯಗಳ ಸ್ಥಾಪನೆ. ಹಳೆಯ ಕಂದಾಚಾರದ, ಸವಕಲು ಮೌಲ್ಯಗಳನ್ನು ಕಿತ್ತೊಗೆಯುವುದು.
ಮಹಿಳೆಯರನ್ನು ಸಮಾಜ ನಿಕೃಷ್ಟವಾಗಿ ಕಾಣುತ್ತಿತ್ತು. ಆಕೆಯ ಸ್ಥಾನ ಮನೆಯಲ್ಲೇ ಹೊರತು ಸಮಾಜದ ಆಗು ಹೋಗುಗಳಲ್ಲಲ್ಲ ಎಂದು ಅಂದಿನ ಸಮಾಜ ಭಾವಿಸಿತ್ತು. ಮಕ್ಕಳನ್ನು ಪೋಷಿಸುವುದಕ್ಕೆ, ಮನೆಯ ಒಳಗಿನ ವ್ಯವಹಾರಗಳನ್ನು ನೋಡಿಕೊಳ್ಳುವುದಕ್ಕೆ ಮಾತ್ರ ಆಕೆಯನ್ನು ಬಳಸಲಾಗುತ್ತಿತ್ತು. ಆಕೆಗೆ ಮತ ನೀಡುವ ಹಕ್ಕಿರಲಿಲ್ಲ. ಸಾರ್ವಜನಿಕ ಜೀವನದಲ್ಲಿ ಗಂಡನಿಗೆ ಹೊಯಿಕೈಯಾಗಿ ಬೆರೆಯುವುದಕ್ಕೆ ಅವಕಾಶ ಇರಲಿಲ್ಲ. ಸ್ತ್ರೀಯರಿಗೆ ವಿದ್ಯಾಭ್ಯಾಸ ಮಾಡುವ ಅವಕಾಶವಿರಲಿಲ್ಲ. ಬಾಲವಿಧವೆಯರಿಗೆ ತಮ್ಮ ಕಾಲ ಮೇಲೆ ನಿಲ್ಲುವ ಸ್ವಾತಂತ್ರ್ಯವಾಗಲಿ ಅದಕ್ಕೆ ಬೇಕಾದ ಶಿಕ್ಷಣವಾಗಲಿ ದೊರಕುತ್ತಿರಲಿಲ್ಲ. ಬಾಲ್ಯದಲ್ಲಿ ಸ್ತ್ರೀಯರು ತಾಯಿ ತಂದೆಗಳ ಆಶ್ರಯದಲ್ಲಿ, ಮದುವೆಯಾದ ಮೇಲೆ ಗಂಡನ ಆಶ್ರಯದಲ್ಲಿ, ಗಂಡ ಸತ್ತ ಮೇಲೆ ಮಕ್ಕಳ ಆಶ್ರಯದಲ್ಲಿ ಪಂಗುವಿನಂತೆ ಬದುಕಬೇಕು ಎಂಬ ಕಟ್ಟಳೆ ಇತ್ತು. ಈ ಕಟ್ಟಳೆಯನ್ನು ಇತ್ತೀಚಿನವರೆಗೂ ಉಳಿಸಿಕೊಂಡು ಬರಲಾಗುತ್ತಿತ್ತು. ಈಶ್ವರಚಂದ್ರ ವಿದ್ಯಾಸಾಗರರು ವಿಧವಾ ವಿವಾಹವನ್ನು ಜಾರಿಗೆ ತಂದರು. ರಾಜಾರಾಂ ಮೋಹನರಾಯರು ಸತೀ ಪದ್ಧತಿಯನ್ನು ಕಾನೂನಿನ ಮೂಲಕ ನಿಷೇಧಿಸಲು ನೆರವಾದರು. ಫುಲೆ ಮಹಾಶಯರು ಸ್ತ್ರೀಯರಿಗೆ ವಿದ್ಯಾಶಾಲೆಗಳನ್ನ ತೆರೆದು ಉಪಕಾರಮಾಡಿದರು. ಗಾಂಧೀಜಿ, ಮನೆಯಲ್ಲಿ ಬಂಧಿಗಳಾಗಿದ್ದ ಹೆಣ್ಣು ಮಕ್ಕಳನ್ನು ಮಕ್ಕಳ ಶಿಕ್ಷಣ ಕಾರ್ಯಕ್ಕೆ,ಅನಾರೋಗ್ಯದಿಂದ ನರಳುವ ಗ್ರಾಮೀಣ ಜನರಿಗೆ ಆರೋಗ್ಯ, ನೈರ್ಮಲ್ಯ ಇವುಗಳ ಬಗೆಗೆ ಶಿಕ್ಷಣ ನೀಡುವ ಕೆಲಸಕ್ಕೆ, ಗ್ರಾಮೀಣ ರೋಗಿಗಳಿಗೆ ಅವರವರ ಮನೆಗೇ ಹೋಗಿ ಔಷಧೋಪಚಾರ ಮಾಡುವುದಕ್ಕೆ ಬೇಕಾದ ತರಬೇತಿಯನ್ನು ನೀಡಿದರು. ಹೆಣ್ಣು ಮಕ್ಕಳನ್ನು ಪರ ಊರುಗಳಲ್ಲಿ ವೈದ್ಯಕೀಯ ಸೇವೆ ನೀಡಲು ಕರೆತಂದರು. ಮೊದಲು ಗಾಂಧೀಜಿ ತಮ್ಮ ಹೆಂಡತಿ ಕಸ್ತೂರಿ ಬಾ ಅವರಿಗೆ ತರಬೇತಿ ನೀಡಿ ಅವರ ನೇತೃತ್ವದಲ್ಲಿ ಹೆಣ್ಣುಮಕ್ಕಳ ಪಡೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಅನುಗೊಳಿಸಿದರು. ಸಾರಾಂಶ
ಜನರ ಅದರಲ್ಲೂ ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಅವರ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಕೃಷಿಯೊಂದಿಗೆ ಪಶು ಸಂಗೋಪಣೆ, ಮೀನು ಸಾಕಾಣಿಕೆ, ಜೇನು ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಂಥ ಕೃಷಿ ಸಂಬಂಧೀ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೈನುಗಾರಿಕೆಯು ಸಣ್ಣ, ಅತೀ ಸಣ್ಣ ರೈತರು ಮತ್ತು ಭೂ ರಹಿತರಿಗೆ ಅದರಲ್ಲೂ ಮಹಿಳೆಯರಿಗೆ ಕಡಿಮೆ ದರದ ಆಹಾರ ಮತ್ತು ಪೋಷಕಾಂಶ ಒದಗಿಸುವುದರ ಜೊತೆಗೆ ಅತೀ ಮುಖ್ಯವಾಗಿ ಸಹಾಯಕಾರಿಯಾಗಿದೆ. ಹೈನುಗಾರಿಕೆಯು ವರ್ಕೋಡು ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ರೈತರ ಉಪ-ಆದಾಯದ ಮುಖ್ಯವಾದ ಮೂಲವಾಗಿದೆ. `ನಿವೃತ್ತ್ ಹೆಸರಿನ ಸ್ವಯಂ ಸೇವಾ ಸಂಸ್ಥೆಯು ಅಲ್ಲಿಯ ಜನರನ್ನು ಸಬಲೀಕರಿಸಿ, ಸಹಾಯ-ಸಹಕಾರಗಳನ್ನೊದಗಿಸಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲಾಗಿದೆ; ಜನರೂ ಸಂಸ್ಥೆಯನ್ನು ನಂಬಿ, ಅನುಸರಿಸಿದರು, ಹಾಗೂ ಈಗ ಅದರ ಪ್ರತಿಫಲವನ್ನು ಸವಿಯುತ್ತಿದ್ದಾರೆ. ಪ್ರಸಕ್ತ ಲೇಖನದಲ್ಲಿ ಹೈನುಗಾರಿಕೆಯ ಉಪಯೋಗಗಳು ಮತ್ತು ಪರಿಣಾಮಗಳನ್ನು ಹೊರತೆಗೆಯುವುದರೊಂದಿಗೆ ಸಾಮಾಜಿಕ-ಆರ್ಥಿಕ ಪರಿಸ್ಥಿತಿ, ಒಳಗೊಂಡಿರುವ ಸವಾಲುಗಳು ಹಾಗೂ ಸಂಸ್ಥೆಯ ವಹಿಸಿರುವ ಪಾತ್ರಗಳನ್ನು ಕುರಿತು ವಿಶ್ಲೇಷಿಸುವ ಪ್ರಯತ್ನ ಮಾಡಲಾಗಿದೆ. ಅಧ್ಯಯನದ ಸಮಸ್ಯೆಯನ್ನು ಶೋಧಿಸಲು ಸಂಖ್ಯಾತ್ಮಕ ಮತ್ತು ಗುಣಾತ್ಮಕ ದತ್ತಾಂಶಗಳೆರಡನ್ನೂ ಮೇಳೈಸಿಕೊಂಡಿರುವ ಮಾಹಿತಿಯನ್ನು ಬಳಸಲಾಗಿದೆ. ಸಂಖ್ಯಾತ್ಮಕ ಹಾಗೂ ಗುಣಾತ್ಮಕಗಳೆರಡೂ ಪ್ರಕಾರದ ದತ್ತಾಂಶಗಳನ್ನು ಸಂಗ್ರಹಿಸಲು ಮನೆ-ಮನೆ ಸಮೀಕ್ಷೆ ಮತ್ತು ಸಹಭಾಗಿತ್ವದ ಚರ್ಚಾ ಪದ್ಧತಿಗಳನ್ನು ಬಳಸಲಾಗಿತ್ತು. ಸಾಧನೆ ಮತ್ತು ಫಲಿತಗಳನ್ನು ಇಲ್ಲಿ ಶೇಕಡಾವಾರು ತೋರಿಸಲಾಗಿದೆ. `ರೈತರು ತಮಗಿರುವ ಜಮೀನಿನ ಸ್ವಲ್ಪ ಭಾಗವನ್ನು ಮೇವು ಬೆಳೆಯಲು ಬಳಸಿ, ಹೈನುಗಾರಿಕೆಯನ್ನು ಮಾಡಿದರೆ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂಬುದನ್ನು ಈ ಅಧ್ಯಯನದಿಂದ ಕಂಡುಕೊಳ್ಳಲಾಗಿದೆ. ಆದರೆ ಸಮಸ್ಯೆಯೆಂದರೆ ಅದರಲ್ಲಿ ಕೆಲವರಿಗೆ ಭೂಮಿಯೇ ಇಲ್ಲಾ, ಆದಾಗ್ಯೂ ಅವರು ಹೈನುಗಾರಿಕೆಯನ್ನು ನಿರ್ವಹಿಸುತ್ತಿರುವುದೇ ವಾಸ್ತವ ಸೌಂದರ್ಯಯುತ ಸತ್ಯ. ಹೈನುಗಾರಿಕೆಯು ವರ್ಕೋಡು ಗ್ರಾಮಸ್ಥರ ಜೀವನವನ್ನು ಉನ್ನತೀಕರಿಸಿದೆ. ಭಾರತ ಅಭ್ಯುದಯ ಸೇವಾ ಸಂಸ್ಥೆ (IDS-I) ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಆಯ್ದ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು 1979 ರಲ್ಲಿ ಹಮ್ಮಿಕೊಂಡಿತು. ಈ ಸಂಸ್ಥೆಯ ಒಂದು ವೈಶಿಷ್ಟ್ಯವೆಂದರೆ ಗ್ರಾಮದ ಜನರು ತಮ್ಮ ಅಭಿವೃದ್ಧಿಯನ್ನು ತಾವೇ ಸಾಧಿಸಿಕೊಳ್ಳಲು ಸಹಾಯಕಾರಿ ಆಗುವುದು. ಈ ಸಂಸ್ಥೆಯನ್ನು ಶ್ರೀ ಎಸ್. ಆರ್. ಹಿರೇಮಠ ಹಾಗೂ ಅವರ ಅಮೇರಿಕನ್ ಪತ್ನಿ ಶ್ರೀಮತಿ ಶ್ಯಾಮಲಾ ಹಿರೇಮಠ (ಸುಶ್ರೀ ಮೇವಿಸ್) ಇವರು ಇತರ ಸ್ವಯಂಸೇವಕರ ಸಹಾಯದಿಂದ ಪ್ರಾರಂಭಿಸಿದರು.
ಒಲಿಂಡಾ ಪೆರೇರರವರು ಮಂಗಳೂರು ಕ್ಯಾಥೊಲಿಕ್ ಕುಟುಂಬದಲ್ಲಿ ಜನಿಸಿದರು. ಮೂವರು ಸಹೋದರಿಯರಲ್ಲಿ ಒಲಿಂಡಾ ಪೆರೇರರವರು ಕಿರಿಯರು. ಕರ್ನಾಟಕದಲ್ಲಿ ಸಮಾಜಕಾರ್ಯ ಶಿಕ್ಷಣ ಕ್ಷೇತ್ರದಪ್ರವರ್ತಕರಲ್ಲಿ ಪ್ರಮುಖರು. ರೋಶನಿ ನಿಲಯ (School of Social Work) ದ ಸ್ಥಾಪಕ ಪ್ರಾಂಶುಪಾಲರಾಗಿ Dr. OlindaPereira ಮಹೋನ್ನತ ಗುರು ಹಾಗೂ ಆದರ್ಶಪ್ರಾಯರಾಗಿ ಸಂಸ್ಥೆಯನ್ನುಕಟ್ಟುವಲ್ಲಿ ಶ್ರಮ ವಹಿಸಿದ್ದಾರೆ. ಇವರು ನಗರ ಸಮುದಾಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿದರು (UCDC), ಹೋಂ ಸೈನ್ಸ್ ಇನ್ಸ್ಟಿಟ್ಯೂಟ್, ಅಂಧರ ಶಾಲೆ (Blind School), ಸೇವಾ ಏಜೆನ್ಸಿ, ಮಹಿಳೆಯರವಸತಿ ನಿಲಯ ಸ್ಥಾಪಿಸಿದರು. ಶಿಕ್ಷಣ, ಮಹಿಳಾ ಸಬಲೀಕರಣಕ್ಕೆ ಪ್ರಶಸ್ತಿನೀಡಿದರು. ಪ್ರಸ್ತುತ ವಿಶ್ವಾಸ್ ಟ್ರಸ್ಟ್ ನಿರ್ದೇಶಕರಾಗಿ ವೃದ್ಧರಿಗೆ ಸಮಗ್ರ ಸಮುದಾಯ ಆಧಾರಿತ ಕಾಳಜಿ ನೀಡಿ ಪೋಷಿಸುತ್ತಿದ್ದಾರೆ.
15ನೇ ಆಗಸ್ಟ್ 2015ಕ್ಕೆ 90 ವರುಷಗಳನ್ನು ದಾಟುತ್ತಿರುವ ಡಾ. ಒಲಿಂಡಾ ಪೆರೇರಾ ತನ್ನ ತೊಂಬತ್ತನೇ ವಯಸ್ಸಿನಲ್ಲಿಯೂ ಇನ್ನೂ ಹದಿಹರೆಯದ ಜೀವನೋತ್ಸಾಹವನ್ನು ಇಟ್ಟುಕೊಂಡಿದ್ದಾರೆ. ಡಾ. ಒಲಿಂಡಾಪೆರೇರಾ ಸಮಾಜಕಾರ್ಯ ಶಿಕ್ಷಣ ಕ್ಷೇತ್ರದಲ್ಲಿ ಒಂದು ನಕ್ಷತ್ರ ಎಂದರೆ ಅತಿಶಯೋಕ್ತಿಯಾಗಲಾರದು. ಇವರ ಸಂದರ್ಶನ ಮಾಡಿದ ಶ್ರೀ ಎಸ್.ಎನ್. ಗೋಪಿನಾಥ್ ಮತ್ತು ಶ್ರೀ ಭೀಮರಾವ್ ಡಾ. ಒಲಿಂಡಾಪೆರೇರಾ ಅವರ ವಿದ್ಯಾರ್ಥಿಗಳು. ಇವರಿಬ್ಬರಿಗೆ ನಾನು ಕೃತಜ್ಞ. - ಸಂಪಾದಕ `ಸಮಾಜಸೇವೆ ಎಂಬ ಪದವನ್ನು ನಾವು ಅನಾದಿಕಾಲದಿಂದಲೂ ಕೇಳುತ್ತ ಬಂದಿದ್ದೇವೆ. ಜನಸೇವೆಯೇ ಜನಾರ್ದನ ಸೇವೆ ಎಂಬಂತೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ರೀತಿಯಲ್ಲಿ ಸಮಾಜಸೇವೆಯನ್ನುಜನರಿಗೋಸ್ಕರ ಮಾಡುತ್ತ ಬಂದಿದ್ದಾನೆ. ಸಮಾಜ ಸೇವಾ ಕಾರ್ಯಕ್ರಮಗಳು ಪ್ರಸ್ತುತಿಯಲ್ಲಿರುವುದನ್ನು ನಾವು ಇಂದಿಗೂ ಕೂಡ ಕಾಣಬಹುದು. ಸಮಾಜ ಸೇವೆಯನ್ನು ನಿಸ್ವಾರ್ಥ ಸೇವೆ ಎಂದರೂ ತಪ್ಪಾಗಲಾರದು.
ಡಾ. ಎಂ. ಚಿದಾನಂದಮೂರ್ತಿ (ಖ್ಯಾತ ಸಂಶೋಧಕರು)
ರಾಷ್ಟ್ರಮಟ್ಟದ ಸಮಾಜವಿಜ್ಞಾನಿ ಸಮಾಜಕಾರ್ಯಕರ್ತ ನನ್ನ ನೆಚ್ಚಿನ ಸ್ನೇಹಿತ ಡಾ. ಎಚ್.ಎಂ. ಮರುಳಸಿದ್ಧಯ್ಯನವರ ಬಗ್ಗೆ ಬರೆದಿರುವ ಪುಸ್ತಕ ಸರಳವಾಗಿ, ಚಿಂತನಾಪರವಾಗಿ ಮೂಡಿ ಬಂದಿರುವುದುಸಂತೋಷದ ವಿಚಾರ. ಪ್ರತಿದಿನ ನಾನು ಅವರೊಂದಿಗೆ ದೂರವಾಣಿಯ ಮೂಲಕ ಸಂಪರ್ಕದಲ್ಲಿದ್ದೇನೆ. ನನ್ನ ಸಂದೇಹ, ಚಿಂತನೆಗಳನ್ನು ಅವರೊಂದಿಗೆ ಹಂಚಿಕೊಳ್ಳುತ್ತಲೇ ಇರುತ್ತೇನೆ. ನಾನು ಒಬ್ಬ ಕನ್ನಡಪ್ರಾಧ್ಯಾಪಕನಾಗಿದ್ದರೂ, ಎಷ್ಟೋ ಸಂದರ್ಭಗಳಲ್ಲಿ ನನಗಿಂತ (ಕನ್ನಡದಲ್ಲಿ ಹೆಚ್ಚು ತಿಳಿದವರಂತೆ) ಗೋಚರಿಸುತ್ತಾರೆ. ಪೀಠಿಕೆ:
ವ್ಯಕ್ತಿ ಮತ್ತು ಸಮಾಜದ ನಡುವೆ ಬಿಡಿಸಲಾಗದ ಬಾಂಧವ್ಯ ಇದೆ. ಅವು ಒಂದೇ ನಾಣ್ಯದ ಎರಡು ಮುಖಗಳು. ವ್ಯಕ್ತಿಗಳಿಲ್ಲದೆ ಸಮಾಜವಿಲ್ಲ, ಸಮಾಜವಿಲ್ಲದ ಬದುಕು ಊಹಿಸಲು ಸಾಧ್ಯವಿಲ್ಲ. ಸಮಾಜವೆಂದರೆ, ಮಾನವನ ಸಾಮಾಜಿಕ ಸಂಬಂಧಗಳ ಬಲೆ ಎಂದು ಅರ್ಥೈಸಲಾಗಿದೆ. ಸಮಾಜದ ಅಸ್ತಿತ್ವ, ಉಗಮ ಹಾಗೂ ರಚನೆಯ ಕುರಿತು ಅನೇಕ ವಾದ-ವಿವಾದಗಳಿವೆ. ಆದರೆ ಒಂದು ಮಾತ್ರ ನಿಜ. ಮಾನವ ಸಮಾಜದ ರಚನೆ ಅತ್ಯಂತ ಪುರಾತನವಾದದು. ಕೋಟಿ ಕೋಟಿ ವರ್ಷಗಳ ಹಿಂದೆ ನಿಸರ್ಗ, ಚರಾತರ ವಸ್ತುಗಳು ಪಶು, ಪ್ರಾಣಿ, ಪಕ್ಷಿ, ಜೀವ ರಾಶಿಗಳ ಜೊತೆಗೆ ಮನುಷ್ಯನೂ ಹುಟ್ಟಿದ. ಪ್ರಾಣಿಗಳ ಜೊತೆಗೆ ಅವುಗಳ ಹಾಗೆ ಬದುಕಿದ. ಮಂಗನಿಂದ ಮಾನವ ಎಂದು ನಾವು ಯಾವಾಗಲೂ ಹೇಳುತ್ತೇವೆ. ಮಾನವನ ವಿಕಸನ ಹಂತ ಹಂತವಾಗಿ ನಡೆಯಿತು. ಪ್ರಾಣಿಗಳಿಲ್ಲವೂ ಮಾನವ ಅತ್ಯಂತ ಶ್ರೇಷ್ಠ ಪ್ರಾಣಿ, ನಗುವ, ಭಾವಿಸುವ ಹಾಗೂ ವೈಚಾರಿಕ ಶಕ್ತಿಯಿಂದಾಗಿ ಮನುಷ್ಯನು ಶ್ರೇಷ್ಠನಾದ. ಮೂಲತಃ ಪ್ರಾಣಿಗಳ ಅಗತ್ಯತೆಗಳನ್ನು ಹೊಂದಿರುವ ಮಾನವ ತನ್ನ ಭಿನ್ನತೆಯಿಂದಾಗಿ, ಶ್ರೇಷ್ಠತೆಯಿಂದಾಗಿ ಮಾನವ ಅಗತ್ಯತೆಗಳನ್ನು ಕಂಡುಕೊಂಡ. ಅದರಲ್ಲಿ ಸಮಾಜ, ಸಾಮಾಜಿಕ ಬದುಕು ಅತ್ಯಂತ ಅಗತ್ಯ ಹಾಗೂ ಅನಿವಾರ್ಯವಾಗಿ ಮಾಡಿಕೊಂಡ. ಸಾಮಾಜಿಕ ಜೀವಿಯಾದ ಮಾನವ ತನ್ನ ಬದುಕನ್ನು ಹಸನಾಗಿಸಿಕೊಳ್ಳಲು ಸಹಜೀವನ, ಸಂಘ ಜೀವನವನ್ನು ಆರಂಭಿಸಿದ. ಅನೇಕ ಗುಂಪು, ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡ. ಜಾತಿ, ಸಮುದಾಯ ಹಾಗು ಧರ್ಮಗಳು, ಮಾನವನ ಬದುಕನ್ನು ರೂಪಿಸುವ ಮೂಲಕ ಒಂದು ವ್ಯವಸ್ಥೆಗೆ ಒಳಪಡಿಸಿದವು. ಇಂದಿಗೂ ಅವು ತಮ್ಮ ಪ್ರಭಾವ ಹಾಗು ನಿಯಂತ್ರಣವನ್ನು ಹೊಂದಿವೆ. ನಮ್ಮ ಸಮಾಜ ಇಂದು ಬಹಳ ದುಸ್ಥಿತಿಯಲ್ಲಿದೆ ಎನ್ನುವ ಮಾತು ಎಲ್ಲೆಡೆ ಕೇಳಿಬರುತ್ತಿದೆ. ನಮ್ಮ ಸುದ್ದಿ ಮತ್ತು ದೃಶ್ಯ ಮಾಧ್ಯಮಗಳು ಬಿತ್ತರಿಸುತ್ತಿರುವ ಸಮಾಚಾರಗಳನ್ನು ಅವಲೋಕಿಸಿದರೆ ಅದು ಬಹಳ ಮಟ್ಟಿಗೆ ನಿಜವೆನಿಸುತ್ತದೆ. ಪ್ರತಿ ದಿನ ಪತ್ರಿಕೆಗಳ ಮೂರನೆಯ ಪುಟದಲ್ಲಿ ಅಚ್ಚಾಗುತ್ತಿರುವ ಹಾಗು ದೂರದರ್ಶನ ಚಾನಲ್ಗಳು ಬಿತ್ತರಿಸುತ್ತಿರುವ ವಿಷಯಗಳನ್ನು ಗಮನಿಸಿ. ಕಳ್ಳತನ, ಕೊಲೆ, ಸುಲಿಗೆ, ಭ್ರಷ್ಟಾಚಾರ, ಆತ್ಮಹತ್ಯೆ, ಸ್ತ್ರೀಯರ ಮೇಲಣ ಅತ್ಯಾಚಾರ (ಇತ್ತೀಚೆಗೆ ಇದು ಗಂಡಸರ ಮೇಲೂ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ), ಮುಂತಾದವೇ ಅಲ್ಲಿ ತುಂಬಿರುತ್ತವೆ. ಇದನ್ನೆಲ್ಲಾ ಗಮನಿಸಿದಾಗ ನಮ್ಮದು ರೋಗಿಷ್ಠ ಸಮಾಜ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಈ ಅಭಿಪ್ರಾಯದಲ್ಲಿ ಕೊಂಚ ಉತ್ಪ್ರೇಕ್ಷೆ ಇರಬಹುದು. ಮೇಲೆ ಹೇಳಿದ್ದೆಲ್ಲಾ ಸಂಪೂರ್ಣ ನಿಜವಾಗಿದ್ದರೆ, ನಾನು ಇದನ್ನು ಬರೆಯಲು ಬದುಕಿರುತ್ತಿರಲಿಲ್ಲ; ಓದಲು ನೀವೂ ಇರುತ್ತಿರಲಿಲ್ಲ. ಯುದ್ಧ, ಕೊಲೆ, ಸುಲಿಗೆ, ಕಳ್ಳತನ, ಅತ್ಯಾಚಾರಗಳು ನಡೆಯುತ್ತಿವೆ. ನಿಜ. ಅವು ಎಲ್ಲಾ ಕಾಲದಲ್ಲೂ ಇದ್ದವೆ. ಸುಮಾರು ಕಳೆದ 5,600 ವರ್ಷಗಳಲ್ಲಿ 14,600 ಯುದ್ಧಗಳು ನಡೆದಿರುವುದಾಗಿ ಇತಿಹಾಸ ಹೇಳುತ್ತದೆ. ಕ್ರೌರ್ಯ, ಆಕ್ರಮಣ ಎಲ್ಲಾ ಜೀವಿಗಳಲ್ಲೂ ಕಂಡುಬರುವ ಒಂದು ಹುಟ್ಟುಗುಣ. ಆದರೆ, ಒಟ್ಟಾರೆಯಾಗಿ ನೋಡಿದರೆ ಅವುಗಳ ಸಂಭವನೀಯತೆಯ ಸಂಖ್ಯೆ ಬಹಳ ಕಡಮೆ. ಅಂಥ ದುಷ್ಕೃತ್ಯಗಳಲ್ಲಿ ತೊಡಗುವ ಜನಗಳ ಸಂಖ್ಯೆ ಅಷ್ಟೇನು ಹೆಚ್ಚಾಗಿರಲಿಕ್ಕಿಲ್ಲ; ಅವರ ಸಂಖ್ಯೆ ಇಡೀ ಸಮಾಜದಲ್ಲಿ ಸುಮಾರು ಶೇಕಡ ಎರಡರಿಂದ ಐದರವರೆಗೆ ಇರಬಹುದು.
ಐ.ಎ.ಎಸ್. ಅಧಿಕಾರ ಮತ್ತು ಸಾಮಾಜಿಕ ಸ್ಥಾನಮಾನ, ಎದುರಲ್ಲಿ ಕಂಡರೆ ಸಾಕು ಎದ್ದು ನಿಂತು ಕೈ ಮುಗಿವ ಜನ,ಅಬ್ಬಾ! ನೆನೆಸಿಕೊಂಡರೆ ಏನೋ ಒಂದು ತರಹದ ಸಂತೋಷ. ಇಂತಹ ಅಧಿಕಾರ, ಗೌರವ, ಮನ್ನಣೆಗಳನ್ನು ಬೇಡವೆನ್ನುವುದು ಯಾರಿಗಾದರು ಸಾಧ್ಯವೇ? ಇಲ್ಲಪ್ಪ ಎನ್ನುವುದು ಸಾಮಾನ್ಯವಾಗಿ ಎಲ್ಲರ ಬಾಯಿಯಿಂದ ಕೇಳಿಬರುವ ಉತ್ತರ. ಆ ರೀತಿಯ ತೀರ್ಮಾನತೆಗೆದುಕೊಳ್ಳುವ ದಿಟ್ಟತನ ಕೇವಲ ಅಪರೂಪ ಮತ್ತು ಅಸಾಧ್ಯರು ಎನಿಸುವಂತಹ ಕೆಲವೇ ಕೆಲವು ವ್ಯಕ್ತಿಗಳಿಗೆ ಮಾತ್ರ ಸಾಧ್ಯ. ಅಂತಹ ಅಸಮಾನ್ಯರ ಸಾಲಿನಲ್ಲಿ ಸೇರಿಸಬಹುದಾದಂತ ಹೆಸರೇ ಅರುಣಾರಾಯ್. ಇವರನ್ನು ಸಮಾಜ ಕಾರ್ಯದಅರುಣೋದಯ ಎಂದರೆ ತಪ್ಪಾಗಲಾರದು. ಇವರು ತಮ್ಮ ಜಾಣ್ಮೆ, ಬುದ್ದಿಶಕ್ತಿಗೆ ದೊರೆತ ಐ.ಎ.ಎಸ್. ಅಧಿಕಾರ ತೊರೆದು ಸಾಮಾಜಿಕಕಾರ್ಯಕರ್ತೆಯಾಗಿ ಸಲ್ಲಿಸಿದ ಸೇವೆ, ಕೊಡುಗೆ ಅಪಾರ.
ಸಾಮಾಜಿಕ ಸಮಸ್ಯೆಯಾಗುತ್ತಿರುವ ಲೈಂಗಿಕಾಪರಾಧ ಮತ್ತು ಏಡ್ಸ್ ರೋಗವನ್ನು ತಡೆಯುವ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ತಿರುಳು
ಲೈಂಗಿಕಾಪರಾಧ ಮತ್ತು ಏಡ್ಸ್ ರೋಗ ಸಮಾಜವನ್ನು ಆವರಿಸುತ್ತಿದೆ. ಈ ಪಿಡುಗನ್ನು ನಿವಾರಿಸಲು ಸರಕಾರವು ಪೂರ್ಣ ಸಫಲತೆಯನ್ನು ಕಾಣುತ್ತಿಲ್ಲ. ಆ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ನಿವಾರಿಸುವ ಶಿಕ್ಷಣದ ಪದ್ಧತಿಯನ್ನು ಪ್ರಾಚೀನ ಶಾಸ್ತ್ರಗಳು ಕೊಟ್ಟಿವೆ. ಈ ವಿಚಾರಧಾರೆಯನ್ನು ಸಂಶೋಧನಾತ್ಮಕವಾಗಿ ಸರಕಾರಕ್ಕೆ ಮತ್ತು ಶಿಕ್ಷಣತಜ್ಞರಿಗೆ ತಿಳಿಸಿ, ಇಂದಿನ ಶಿಕ್ಷಣದಲ್ಲಿ ಈ ಶಿಕ್ಷಣವನ್ನು ಕೂಡ ಅಳವಡಿಸಿ, ಸಮಾಜದ ಯುವಜನರಿಗೆ ತಿಳಿಸುವ ಯೋಗ್ಯ ಯೋಜನೆ ಕೈಗೊಳ್ಳುವ ಮೂಲಕ ಸಾಮಾಜಿಕ ಸಮಸ್ಯೆಯನ್ನು ಪರಿಹರಿಸಲು ಪೂರಕವಾದ ವಿಶೇಷ ಸಂಶೋಧನಾತ್ಮಕವಾದ ಲೇಖನ. ಸಂಕ್ಷಿಪ್ತ ವಿವರ: ಸಮಾಜಕಾರ್ಯದ ಕಲ್ಪನೆ ಮನೆಯಲ್ಲಿ ಆರಂಭವಾಗಿ, ಶಾಲೆಯಲ್ಲಿ ಅದರ ಕಲಿಕೆ ಮುಂದುವರೆಯುತ್ತದೆ ಮತ್ತು ಬದುಕು ಸಾಗಿದಂತೆ ಅದು ವಿಸ್ತಾರವಾಗುತ್ತಾ ಹೋಗುತ್ತದೆ. ಆದರೆ ತಮ್ಮ ಮತ್ತು ಸಮಾಜದ ಕುರಿತು ಜವಾಬ್ದಾರಿಯಿಂದ ವರ್ತಿಸಬಲ್ಲಂತಹ ಮೌಲ್ಯಗಳು ಮತ್ತು ಸ್ಪಷ್ಟತೆಯುಳ್ಳ ಸಧೃಡ ವ್ಯಕ್ತಿಗಳನ್ನ ನಿರ್ಮಾಣ ಮಾಡುವುದರ ಕುರಿತು ಇಂದಿನ ಶಿಕ್ಷಣ ರಾಜಿ ಮಾಡಿಕೊಂಡಿದೆ. ಆದುದರಿಂದಲೇ ಕೇವಲ ಜೀವನ ಕೌಶಲವಲ್ಲದೇ ಪ್ರಸ್ತುತ ಸಮಯಕ್ಕೆ ಅತ್ಯವಶ್ಯಕವಾದುದು ಜೀವನ್ಮುಖಿ ಶಿಕ್ಷಣ. ಬೆಂಗಳೂರು ನಗರದ 10-16 ವರ್ಷದ ಮಕ್ಕಳ ಜೊತೆ ನಡೆಸಲಾದ ಪ್ರಾಯೋಗಿಕವಾದ ಮತ್ತು ಸ್ವಾನುಭವದ ಸಂಶೋಧನೆಯ ಆಧಾರದ ಮೇಲೆ ರಚಿತವಾದ ಮತ್ತು ಮಕ್ಕಳನ್ನ ಸಬಲೀಕರಣಗೊಳಿಸಿ ವಿಕಸಿತಗೊಳಿಸುವ ಮತ್ತು ಉತ್ಕೃಷ್ಠತೆಯನ್ನು ಸಾಧಿಸಲು ಸಹಕರಿಸುವ ವಿಚಾರ ಮತ್ತು ಸಾಧನದ ಕುರಿತು ಈ ಲೇಖನ ಬೆಳಕು ಚೆಲ್ಲುತ್ತದೆ. ಇಲ್ಲಿ ವಿವರಿಸಲಾಗಿರುವ ಮಾಡ್ಯೂಲ್ ಕಲಿಯುವಿಕೆ, ಕ್ರಿಯಾಶೀಲತೆ ಮತ್ತು ಇವರೆಡನ್ನ ಸಮಗ್ರವಾಗಿ ಸಮಾಜದ ಒಳಿತಿಗೆ ಬಳಸುವ ಬಗೆಗೆ ಕೇಂದ್ರೀಕೃತವಾಗಿದೆ. ಇದಕ್ಕಾಗಿ ಮಕ್ಕಳಿಗೆ ಆಳವಾದ ಸಮಾಲೋಚನೆ ಮಾಡುವ ಪ್ರಕ್ರಿಯೆಯನ್ನ ತಿಳಿಸಿಕೊಡಲಾಗುವುದು. ಇದರ ಅತೀ ಮುಖ್ಯ ಅಂಶವು ಮಕ್ಕಳು ತಮ್ಮ 10ನೇ ತರಗತಿಯ ಭಾಗವಾಗಿ ಪೂರ್ಣಗೊಳಿಸುವ SAP (Social Action Projects) ಸೋಷಿಯಲ್ ಆಕ್ಷನ್ ಪ್ರಾಜೆಕ್ಟ್ಸ್.
ಅವರು ದೇವಜೀಭಾಯಿ ಗೋವಿಂದಭಾಯಿ ಫತೇಪಾರ. ಲೋಕಸಭೆಯಲ್ಲಿ ಗುಜರಾತಿನ ಸುರೇಂದ್ರ ನಗರವನ್ನು ಪ್ರತಿನಿಧಿಸುತ್ತಾರೆ. ಮೊದಲ ಸಲ ಆರಿಸಿ ಬಂದವರು.
ಇತ್ತೀಚೆಗೆ ಲೋಕಸಭೆಯಲ್ಲಿ ಅವರೊಂದು ಪ್ರಶ್ನೆ ಕೇಳಿದ್ದರು. ತಾವು ಕೇಳುತ್ತಿರುವ ಪ್ರಶ್ನೆಯ ಹಿಂದೆ ತಮಗೇ ತಿಳಿಯದ ರಾಜಕಾರಣ ಅಡಗಿದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಈ ರಾಜಕಾರಣ ತಮ್ಮದೇ ಗುಜರಾತಿನ ಸರ್ಕಾರವನ್ನು ಮತ್ತು ಇತ್ತೀಚಿನ ತನಕ ಆ ಸರ್ಕಾರದ ಮುಖ್ಯಮಂತ್ರಿಯಾಗಿದ್ದು ಇದೀಗ ಪ್ರಧಾನಿ ಆಗಿರುವ ಪ್ರಚಂಡ ನಾಯಕನನ್ನು ಅಪರಾಧಿಯ ಕಟಕಟೆಯಲ್ಲಿ ನಿಲ್ಲಿಸುತ್ತದೆ ಎಂಬುದನ್ನು ಅರಿಯದಷ್ಟು ಅಮಾಯಕರು ಅವರು. |
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGJOB |
HR SERVICESOTHER SERVICESnIRATHANKA CITIZENS CONNECT |
NIRATHANKAPOSHOUR OTHER WEBSITESSubscribe |
MHR LEARNING ACADEMY
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|